
ರೋಣ(ಜೂ.17): ಸಾಲ ಪಾವತಿಸುವಂತೆ ಬ್ಯಾಂಕಿನವರು ನೋಟಿಸ್ ನೀಡಿದ್ದರಿಂದ ಬೇಸತ್ತು ರೈತ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತ ರೈತ ಬಸವರಾಜ ಆರೇರ (49) ರೋಣದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನಲ್ಲಿ 3 ವರ್ಷಗಳ ಹಿಂದೆ .1.98 ಲಕ್ಷ ಬೆಳೆ ಸಾಲ ಪಡೆದಿದ್ದ. ರೈತ 4 ಎಕರೆ ಜಮೀನು ಹೊಂದಿದ್ದು, ಕಳೆದ 3 ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಸಂಕಷ್ಟಕ್ಕಿಡಾಗಿದ್ದ. ತನ್ನಿಂದ ಬ್ಯಾಂಕ್ ಸಾಲ ತೀರಿಸಲು ಆಗುತ್ತಿಲ್ಲ ಎಂದು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ.
ಮಾನಸಿಕ ಖಿನ್ನತೆ: ರೈಫಲ್ನಿಂದ ಶೂಟ್ ಮಾಡಿಕೊಂಡು ಪೇದೆ ಆತ್ಮಹತ್ಯೆ!
ಸಾಲ ತುಂಬುವಂತೆ ಕಳೆದ 6 ತಿಂಗಳಿನಿಂದ ಕೆವಿಜಿ ಬ್ಯಾಂಕಿನವರು ನೋಟಿಸ್ ನೀಡುತ್ತಿದ್ದರು. ಅಲ್ಲದೇ ಬುಧವಾರ ಮತ್ತೊಂದು ನೋಟಿಸ್ ಬಂದಿತ್ತು. ಇದರಿಂದ ಸಾಲ ತೀರಿಸಲು ನನ್ನಿಂದಾಗುತ್ತಿಲ್ಲ ಎಂದು ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ರೈತನ ಪತ್ನಿ ಗೀತಾ ಆರೇರ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ