ಕಲಬುರಗಿ: ಸಾಲದ ಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Published : Jun 25, 2023, 09:45 PM IST
ಕಲಬುರಗಿ: ಸಾಲದ ಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾರಾಂಶ

ಎಸ್‌ಬಿಐ ಬ್ಯಾಂಕ್‌ನಲ್ಲಿ 4 ಲಕ್ಷ ಮತ್ತು ಗ್ರಾಮದ ಸಹಕಾರಿ ಸಂಘದ ಬ್ಯಾಂಕ್‌ನಲ್ಲಿ 99 ಸಾವಿರ ಹಾಗೂ ಮಕ್ಕಳ ಮದುವೆಗೆಂದು ಗ್ರಾಮದಲ್ಲಿ ಕೈಸಾಲ ತೆಗೆದುಕೊಂಡಿದ್ದ ಇಮಾಮಸಾಬ್‌ ಗೋರಮಿಟಕಲ್‌

ಕಲಬುರಗಿ(ಜೂ.25):  ಮಳೆ, ಬೆಳೆ ಸರಿಯಾಗಿ ಆಗದೇ ಇರುವುದರಿಂದ ಮಾಡಿದ ಸಾಲ ಹೇಗೆ ತೀರಿಸುವುದು ಎಂಬ ಚಿಂತೆಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಬ್‌ ಅರ್ಬನ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅವರಾದ (ಬಿ) ಗ್ರಾಮದಲ್ಲಿ ನಡೆದಿದೆ. ಇಮಾಮಸಾಬ್‌ ಗೋರಮಿಟಕಲ್‌ ಮೃತ​ಪಟ್ಟ ವ್ಯಕ್ತಿ​ಯಾ​ಗಿ​ದ್ದಾರೆ.

ಅವರಾದ (ಬಿ) ಸೀಮಾಂತರದಲ್ಲಿ 4.22 ಗುಂಟೆ ಜಮೀನಿದ್ದು, ಎಸ್‌ಬಿಐ ಬ್ಯಾಂಕ್‌ನಲ್ಲಿ 4 ಲಕ್ಷ ಮತ್ತು ಗ್ರಾಮದ ಸಹಕಾರಿ ಸಂಘದ ಬ್ಯಾಂಕ್‌ನಲ್ಲಿ 99 ಸಾವಿರ ಹಾಗೂ ಮಕ್ಕಳ ಮದುವೆಗೆಂದು ಗ್ರಾಮದಲ್ಲಿ ಕೈಸಾಲ ತೆಗೆದುಕೊಂಡಿದ್ದರು. 

ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು, ಆತ್ಮಹತ್ಯೆ ಶರಣಾದ ಮನೆ ಮಾಲಕಿ

ಮಳೆ, ಬೆಳೆ ಸರಿಯಾಗಿ ಆಗದೇ ಇರುವುದರಿಂದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥರಾಗಿದ್ದ ಇಮಾಮಸಾಬ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಸಬ್‌ ಅರ್ಬನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು