ಕಾರು-ಬೈಕ್ ನಡುವೆ ಭೀಕರ ಅಪಘಾತ; ಯುಗಾದಿ ಹಬ್ಬದಂದೇ ಹೆಡ್‌ಕಾನ್ಸ್‌ಟೇಬಲ್ ದುರ್ಮರಣ!

Published : Apr 09, 2024, 10:49 PM IST
ಕಾರು-ಬೈಕ್ ನಡುವೆ ಭೀಕರ ಅಪಘಾತ; ಯುಗಾದಿ ಹಬ್ಬದಂದೇ ಹೆಡ್‌ಕಾನ್ಸ್‌ಟೇಬಲ್ ದುರ್ಮರಣ!

ಸಾರಾಂಶ

ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹೆಡ್‌ ಕಾನ್ಸ್‌ಟೇಬಲ್ ಓರ್ವರು ಸ್ಥಳದಲ್ಲಿ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಅಂಡರ್‌ಪಾಸ್‌ನಲ್ಲಿ ನಡೆದಿದೆ.

ಚಿಕ್ಕಮಗಳೂರು (ಏ.9): ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹೆಡ್‌ ಕಾನ್ಸ್‌ಟೇಬಲ್ ಓರ್ವರು ಸ್ಥಳದಲ್ಲಿ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಅಂಡರ್‌ಪಾಸ್‌ನಲ್ಲಿ ನಡೆದಿದೆ.

ಮಲ್ಲಿಕಾರ್ಜುನ್ (44) ಮೃತ ದುರ್ದೈವಿ. ಮೃತ ಮಲ್ಲಿಕಾರ್ಜುನ ಕಡೂರು ತಾಲೂಕಿನ ಚಟ್ಟನಹಳ್ಳಿಯವರು ಎಂದು ಹೇಳಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಪ್ರಕರಣವೊಂದರ ಸ್ಥಳ ಮಹಜರ್ ಗೆ ಅಂಚೆಚೋಮನಹಳ್ಳಿಗೆ ಹೊರಟಿದ್ದ ವೇಳೆ ನಡೆದಿರುವ ಭೀಕರ ಅಪಘಾತ. ಡಿಕ್ಕಿಯಾದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿ ಮೃತಪಟ್ಟಿದ್ದಾರೆ. 

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ