
ಮಂಡ್ಯ(ಜೂ.20): ಮಗಳ ಆತ್ಮಹತ್ಯೆಯಿಂದ ನೊಂದ ತಂದೆಯೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ಬಾಂಧವ್ಯ (17) ರಾಜು (65) ಸಾವಿಗೀಡಾದ ತಂದೆ ಮಗಳಾಗಿದ್ದಾರೆ.
ಪಿಯುಸಿ ಕಾಲೇಜು ಸೇರಿಸುವ ವಿಚಾರದಲ್ಲಿ ತಂದೆಯ ಜೊತೆ ಮುನಿಸಿಕೊಂಡಿದ್ದ ಬಾಂಧವ್ಯ ಬೆಳಗಿನ ಜಾವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಹಳೆ ಮನೆಯ ಕಟ್ಟಿಗೆಯ ಚಿತೆ ಮಾಡಿ ಸುಸೈಡ್ಗೆ ಶರಣಾದ ಹಿರಿಯ ಜೀವ
ಮಗಳ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ತಂದೆ ರಾಜು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ