ಶಿರಸಿ: ಕೊರೋನಾಗೆ ಅಳಿಯ ಬಲಿ, ವಿಷ ಸೇವಿಸಿ ಮಾವ ಆತ್ಮಹತ್ಯೆ

Kannadaprabha News   | Asianet News
Published : Jun 28, 2021, 10:04 AM ISTUpdated : Jun 28, 2021, 10:46 AM IST
ಶಿರಸಿ: ಕೊರೋನಾಗೆ ಅಳಿಯ ಬಲಿ, ವಿಷ ಸೇವಿಸಿ ಮಾವ ಆತ್ಮಹತ್ಯೆ

ಸಾರಾಂಶ

* ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಕನಾಳದಲ್ಲಿ ನಡೆದ ಘಟನೆ * ತಿಂಗಳ ಹಿಂದೆ ಕೊರೋನಾಕ್ಕೆ ಬಲಿಯಾಗಿದ್ದ ಅಳಿಯ * ಮದ್ಯದೊಂದಿಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಾವ  

ಶಿರಸಿ(ಜೂ.28): ಅಳಿಯ ಕೊರೋನಾದಿಂದ ಮೃತಪಟ್ಟಿದ್ದು ಮುಂದೆ ತನ್ನ ಮಗಳ ಜೀವನ ಹೇಗೆ ಎಂದು ಮನನೊಂದು ಮಾವ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಕನಾಳದಲ್ಲಿ ನಡೆದಿದೆ.

ನಿಂಗಪ್ಪ ಕೆರಿಯಾ ನಾಯ್ಕ (67) ಆತ್ಮಹತ್ಯೆ ಮಾಡಿಕೊಂಡವರು. ತನ್ನ ಅಳಿಯ ತಿಂಗಳ ಹಿಂದೆ ಕೊರೋನಾಕ್ಕೆ ಬಲಿಯಾಗಿದ್ದರು. ಇದನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ ಮಾವ ನಿಂಗಪ್ಪ ವಿಪರೀತ ಕುಡಿತದ ದಾಸನಾಗಿದ್ದ. ಅದೇ ರೀತಿ ಶನಿವಾರ ಸಂಜೆ ಎಲ್ಲರೂ ಊಟ ಮಾಡುತ್ತಿರುವ ವೇಳೆ ಮನೆ ಹಿಂದೇ ಹೋಗಿ ಮದ್ಯದೊಂದಿಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶಿವಮೊಗ್ಗ: ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಈ ಕುರಿತು ಬನವಾಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್‌ಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ