
ಬೆಂಗಳೂರು(ಅ.19): ಮಗನ ಕೈ ಕಾಲು ಕಟ್ಟಿ ಹಲ್ಲೆ ನಡೆಸಿ ತಂದೆಯೇ ಕೊಲೆಗೈದ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಇಂದು(ಶನಿವಾರ) ನಡೆದಿದೆ. ರಾಜೇಶ್ ಎಂಬಾತನೇ ತಂದೆಯಿಂದಲೇ ಕೊಲೆಯಾದ ದುರ್ದೈವಿ ಮಗ. ಲಿಂಗಪ್ಪ ಮಗನ ಕೊಲೆಗೈದ ಆರೋಪಿಯಾಗಿದ್ದಾನೆ.
ಮಗ ರಾಜೇಶ್ ಕುಡಿದು ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನಂತೆ. ಮಗನ ಕಿರುಕುಳಕ್ಕೆ ಬೇಸತ್ತ ತಂದೆ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ಮೈಸೂರು: ನಂಜನಗೂಡಲ್ಲಿ ಕತ್ತು ಕೊಯ್ದು ವ್ಯಕ್ತೆ ಕೊಲೆ, ವಾಮಾಚಾರದ ಶಂಕೆ?
ಮಗನ ಕಿರುಕುಳ ತಾಳಲಾರದೇ ಲಿಂಗಪ್ಪ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ