ಸಿಂಧನೂರು: ಮನೆ ಮಾರಾಟ ವಿಚಾರ, ಸ್ವಂತ ‌ಮಗನನ್ನೇ ಕೊಲೆಗೈದ ಪಾಪಿ ತಂದೆ

Suvarna News   | Asianet News
Published : Jul 30, 2021, 11:46 AM IST
ಸಿಂಧನೂರು: ಮನೆ ಮಾರಾಟ ವಿಚಾರ, ಸ್ವಂತ ‌ಮಗನನ್ನೇ ಕೊಲೆಗೈದ ಪಾಪಿ ತಂದೆ

ಸಾರಾಂಶ

*  ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ನಡೆದ ಘಟನೆ *  ಈಜು ಬಾರದ ಮಗನನ್ನ ಕಾಲುವೆಗೆ ನೂಕಿ ಕೊಲೆಗೈದ ತಂದೆ *  ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು  

ರಾಯಚೂರು(ಜು.30): ಮನೆ ಮಾರಾಟದ ವಿಚಾರವಾಗಿ ಅಪ್ಪ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. ಭೀಮಪ್ಪ (18) ಕೊಲೆಯಾದ ದುರ್ವೈವಿಯಾಗಿದ್ದಾನೆ. ಹಣಮಂತಪ್ಪ (65) ಸ್ವಂತ ‌ಮಗನನ್ನೇ ಕೊಲೆಗೈದ ಪಾಪಿ ತಂದೆಯಾಗಿದ್ದಾನೆ. 

ಏನಿದು ಪ್ರಕರಣ?

ಎರಡು ಮದುವೆ ಆಗಿದ್ದ ಆರೋಪಿ ಹಣಮಂತಪ್ಪ ವಿವಿಧೆಡೆ ಸಾಲ ಮಾಡಿಕೊಂಡಿದ್ದನು. ಹೀಗಾಗಿ ಹಣಮಂತಪ್ಪ ಮನೆ ಮಾರಾಟ ಮಾಡಲು ಮುಂದಾಗಿದ್ದನು. ಇದಕ್ಕೆ ಮಗ ಭೀಮಪ್ಪ ತಕರಾರು ತಗೆಗಿದ್ದ ಎಂದು ಹೇಳಲಾಗುತ್ತಿದೆ. 

'ಗನ್ ಜತೆ ಒಂದು ಸೆಲ್ಫಿ' ಪ್ರಾಣ ಕಳೆದುಕೊಂಡ ನವವಿವಾಹಿತೆ

ಇದೇ ಸಿಟ್ಟಿನಿಂದ ಈಜು ಬಾರದ ಮಗನನ್ನ ಕಾಲುವೆಗೆ ನೂಕಿ ಕೊಲೆಗೈದಿದ್ದಾನೆ ಅಪ್ಪ. ಮಗನಿಗೆ ‌ನಂಬಿಸಿ ಮುಖ್ಯ ಕಾಲುವೆಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿಸು ಬಂದಿದೆ. ಸದ್ಯ ಪೊಲೀಸರು ತನಿಖೆ ನಡೆಸಿ ಆರೋಪಿ ಹಣಮಂತಪ್ಪನನ್ನ ಬಂಧಿಸಿದ್ದಾರೆ. ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!