ಬೆಳಗಾವಿ ಕೊಳವೆಬಾವಿ ದುರಂತಕ್ಕೆ ಟ್ವಿಸ್ಟ್‌: ಮಗನನ್ನೇ ಕೊಂದು ಬೋರ್‌ವೆಲ್‌ಗೆ ಎಸೆದ ಪಾಪಿ ತಂದೆ

Suvarna News   | Asianet News
Published : Sep 19, 2021, 09:43 AM IST
ಬೆಳಗಾವಿ ಕೊಳವೆಬಾವಿ ದುರಂತಕ್ಕೆ ಟ್ವಿಸ್ಟ್‌:  ಮಗನನ್ನೇ ಕೊಂದು ಬೋರ್‌ವೆಲ್‌ಗೆ ಎಸೆದ ಪಾಪಿ ತಂದೆ

ಸಾರಾಂಶ

*  ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ನಡೆದ ಘಟನೆ *  ಪತ್ನಿಯ ಮೇಲೆ ಸಂಶಯ ಪಟ್ಟು ತನ್ನ ಸ್ವಂತ ಮಗನನ್ನೇ ಕೊಂದ ತಂದೆ *  ಪೊಲೀಸ್ ತನಿಖೆ ವೇಳೆ ಎಲ್ಲವನ್ನೂ ಬಾಯಿಬಿಟ್ಟ ಕೊಲೆಗಡುಕ‌ ಸಿದ್ದಪ್ಪ   

ಬೆಳಗಾವಿ(ಸೆ.19): ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ಬೋರ್​ವೆಲ್​ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಹೌದು, ಪತ್ನಿಯ ಮೇಲೆ ಸಂಶಯ ಪಟ್ಟ ತಂದೆ ತನ್ನ ಸ್ವಂತ ಮಗನನ್ನೇ ಹತ್ಯೆ ಮಾಡಿ ಬೋರ್‌ವೆಲ್‌ ಎಸೆದಿದ್ದಾನೆ.

ಮಗು ನನ್ನದಲ್ಲ ಅಂತ ಸಿದ್ದಪ್ಪ ಪತ್ನಿಯ ಜತೆ ಪದೇ ಪದೇ ಕಿರಿಕ್ ಮಾಡುತ್ತಿದ್ದನಂತೆ. ಈ ಕುರಿತು ಗ್ರಾಮದ ಮುಖಂಡರು ಹಲವು ಬಾರಿ ರಾಜಿ ಪಂಚಾಯಿತಿ ಕೂಡ ನಡೆಸಿದ್ದರು ಎಂದು ತಿಳಿದು ಬಂದಿದೆ. ಸಾಕಷ್ಟು ಬಾರಿ ಹೆಂಡತಿ ಮನವಿ ಮಾಡಿದ್ರೂ ಕ್ಯಾರೆ ಅನ್ನದ ಸಿದ್ದಪ್ಪ, ನಿತ್ಯವೂ ಹೆಂಡತಿ ಜತೆಗೆ ಕಿರಿಕ್ ಮಾಡುತ್ತಿದ್ದ. 

ಕರ್ನಾಟಕದಲ್ಲಿ ಮತ್ತೆ ಸಂಭವಿಸಿದ ಬೋರ್​ವೆಲ್ ದುರಂತ: ಎರಡೂವರೆ ವರ್ಷದ ಮಗು ಸಾವು

ಪತ್ನಿಯ ತಾಯಿ ಮನೆಯಲ್ಲಿಯೇ ಮಗು ಶರತ್ ಇತ್ತು.  ಒಂದು ವಾರದ ಹಿಂದೆ ಶರತ್‌ನ ಎರಡನೇ ವರ್ಷದ ಹುಟ್ಟುಹಬ್ಬ ಸಹ ಆಚರಿಸಿದ್ದರು. ಮಗ ತನ್ನ ಮನೆಗೆ ಬರ್ತಿದ್ದಂತೆ ಸಿದ್ದಪ್ಪ ಕೊಲೆ ಮಾಡಲು ಸಂಚು ರೂಪಿಸಿದ್ದನಂತೆ.  ಇದೀಗ ಮಗನನ್ನ ಕೊಂದ ಸಿದ್ದಪ್ಪ ಜೈಲು ಸೇರಿದ್ದಾನೆ.  

ಪೊಲೀಸ್ ತನಿಖೆ ವೇಳೆ ಕೊಲೆಗಡುಕ‌ ಸಿದ್ದಪ್ಪ ಎಲ್ಲವನ್ನೂ ಬಾಯಿಬಿಟ್ಟಿದ್ದಾನೆ. ಈ ಸಂಬಂಧ ಹಾರೂಗೇರಿ ಪೊಲೀಸರು ಸಿದ್ದಪ್ಪನನ್ನ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.  ಪೋಸ್ಟ್ ಮಾರ್ಟ್ಂ ಬಳಿಕ ಶವ ತಂದು ಅಂತ್ಯಕ್ರಿಯೆ ಮಾಡಲಾಗಿದೆ. ರಾಯಬಾಗ ಸರ್ಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟ್ಂ ಮುಗಿದ ಬಳಿಕ ಶರತ್‌ನ ಅಂತ್ಯಸಂಸ್ಕಾರವನ್ನ ಕುಟುಂಬಸ್ಥರು ನೆರವೇರಿಸಿದ್ದಾರೆ. ಪಾಪಿ ತಂದೆ ಸಿದ್ದಪ್ಪನ ಸ್ವಂತ ಜಮೀನಿನಲ್ಲಿ ಮಗ ಶರತ್‌ನ ಅಂತ್ಯಕ್ರಿಯೆ ನೆರವೇರಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!