ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ತಂದೆ: ಕಾರಣ?

Suvarna News   | Asianet News
Published : Mar 21, 2020, 07:45 AM ISTUpdated : Mar 21, 2020, 07:46 AM IST
ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ತಂದೆ: ಕಾರಣ?

ಸಾರಾಂಶ

ಹೆತ್ತಕರುಳ ಉಸಿರನ್ನೇ ನಿಲ್ಲಿಸಿದ ನೀಚ ತಂದೆ| ಹೆತ್ತ ತಂದೆಯಿಂದಲೇ ಇಬ್ಬರು ಮಕ್ಕಳ ಕೊಲೆ| ಮನೆಯಲ್ಲಿ ಸೈಕೋ ರೀತಿ ವರ್ತಿಸುತ್ತಿದ್ದ ಜತಿನ್| ಪ್ರೀತಿಸಿ ಟೆಕ್ಕಿಯನ್ನು ಮದ್ವೆ ಆಗಿದ್ದ ಸೈಕೋ| ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರ್ತಿದ್ದ ಸೈಕೊ|

ಬೆಂಗಳೂರು[ಮಾ.21]: ಮಕ್ಕಳು ನನ್ನ ರೀತಿ ಬೆಳಿತಾ ಇಲ್ಲ, ಇಂತಹ ಮಕ್ಕಳು ಬೇಡ್ವೇ ಬೇಡ ಎಂದು ತಂದೆಯೊಬ್ಬ ಇಬ್ಬರು ಮಕ್ಕಳನ್ನ ಕೊಲೆ ಮಾಡಿದ ಘಟನೆ ಹುಳಿಮಾವು ಠಾನಾ ವ್ಯಾಪ್ತಿ ಅಕ್ಷಯನಗರದ HONEY DEW ಅಪಾರ್ಟ್ಮೆಂಟ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತೌಶಿನಿ( 3),ಶಾಸ್ತಾ(1.5) ಮೃತ ದುರ್ದೈವಿಗಳಾಗಿದ್ದಾರೆ. ಯಂದೆ ಜತಿನ್ ( 35 ) ಕೊಲೆ ಮಾಡಿದ ತಂದೆಯಾಗಿದ್ದಾನೆ. 

ಸಂಬಳ ಕೇಳಿದ್ದೇ ತಪ್ಪಾಯ್ತಾ? ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಮಾಲೀಕ!

ಕೇರಳ ಮೂಲದ ಜತಿನ್ ತಮಿಳುನಾಡು ಮೂಲದ ಟೆಕ್ಕಿ ಲಕ್ಷ್ಮಿಶಂಕರಿ ಎಂಬುವರೊಮದಿಗೆ ಪ್ರೀತಿಸಿ ಮದುವೆಯಾಗಿದ್ದ ಎಂದು ತಿಳಿದು ಬಂದಿದೆ. ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದ. ಮೆನಯಲ್ಲಿಯೇ ಕೂತು ಕೂತು ಸೈಕೋ ತರ ವರ್ತಿಸುತ್ತಿದ್ದ. ಇದೇ ವಿಚಾರವಾಗಿ ಗಂಡ, ಹೆಂಡತಿ ನಡುವೆ ಗಲಾಟೆ ನಡೆಯುತ್ತಿತ್ತು, ನಿನ್ನೆ ರಾತ್ರಿ ಕೂಡ ಜಗಳವಾಡಿದ್ದಾರೆ. ಈ ವೇಳೆ ಕೋಪಗೊಂಡ ಈತ ಏಕಾಏಕಿ ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾನೆ. 

ಪ್ರಿಯತಮನೊಂದಿಗಿನ ಕಾಮನೆ ತೀರಿಸಿಕೊಳ್ಳಲು ಗಂಡನ ರುಂಡ, ಕೈಕಾಲು ಲಕ್ಷ್ಮಣ ತೀರ್ಥದಲ್ಲಿ!

ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ಧಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?