ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಜಾಬ್ ಕಳೆದುಕೊಳ್ಳುವ ಭೀತಿ, ಪೇಟಿಎಂ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

Published : Feb 27, 2024, 04:22 PM ISTUpdated : Feb 27, 2024, 04:23 PM IST
ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಜಾಬ್ ಕಳೆದುಕೊಳ್ಳುವ ಭೀತಿ, ಪೇಟಿಎಂ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

ಸಾರಾಂಶ

ಇತ್ತೀಚೆಗೆ ಪೇಟಿಎಂ ಪೇಮೆಂಟ್ಸ್  ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದ ಬೆನ್ನಲ್ಲೇ  ಉದ್ಯೋಗಿಗಳಿಗೆ ಜಾಬ್ ಕಳೆದುಕೊಳ್ಳುವ ಭಯ ಆರಂಭವಾಗಿದೆ. ಇದೀಗ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ  ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದೋರ್ (ಫೆ.27): ಇತ್ತೀಚೆಗೆ ಪೇಟಿಎಂ ಪೇಮೆಂಟ್ಸ್  ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಅದರಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಜಾಬ್ ಕಳೆದುಕೊಳ್ಳುವ ಭಯ ಆರಂಭವಾಗಿದೆ. ಇದೀಗ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ಸಂಭಾವ್ಯ ಉದ್ಯೋಗ ನಷ್ಟದ ಒತ್ತಡದಿಂದಾಗಿ ಇಂದೋರ್‌ನಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಕಳೆದ ಕೆಲವು ದಿನಗಳಿಂದ ಕಂಪನಿಯು ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಕೆಲಸ ಕಳೆದುಕೊಂಡರೆ ಮುಂದೇನು ಎಂಬ ಭಯ ಅವರನ್ನು ಕಾಡಿತ್ತು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾವು ಈ  ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಾರೇಶ್ ಕುಮಾರ್ ಸೋನಿ ತಿಳಿಸಿದ್ದಾರೆ. 

ಗುಪ್ತಾ ಭಾನುವಾರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಪೊಲೀಸರಿಗೆ ಯಾವುದೇ ಡೆತ್‌ನೋಟ್‌ ಸಿಕ್ಕಿಲ್ಲ ಎಂದು ಸೋನಿ ತಿಳಿಸಿದ್ದಾರೆ. ಗಮನಿಸಬೇಕಾದ ವಿಚಾರವೆಂದರೆ ರಿಸರ್ವ್ ಬ್ಯಾಂಕ್ ಮಾರ್ಚ್ 15 ರ ನಂತರದ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂಗೆ PPBL ಅನ್ನು ನಿರ್ಬಂಧಿಸಿದೆ.

ನೀವು ಪಾವತಿಗೆ ಪೇಟಿಎಂ UPI ಬಳಸುತ್ತಿದ್ದೀರಾ? ಹಾಗಾದರೆ ನಿಮಗಿದೆ ಆರ್‌ಬಿಐ ಸಂದೇಶ!

ಇತ್ತೀಚೆಗೆ ಪೇಟಿಎಂ ಪೇಮೆಂಟ್ಸ್  ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಯುಪಿಐ ಪಾವತಿ ವ್ಯವಸ್ಥೆ ಬಗ್ಗೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ತುಸು ಭಯ ಮೂಡಿರೋದಂತೂ ನಿಜ. ಆರ್ ಬಿಐ ನಿರ್ಧಾರದ ಬೆನ್ನಲ್ಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮಾರ್ಚ್ 15ರಂದು ಮುಚ್ಚಲ್ಪಡಲಿದೆ.

2024ರ ಫೆಬ್ರವರಿ 29 ರ ನಂತರ ಯಾವುದೇ ಗ್ರಾಹಕ ಖಾತೆಗಳು, ಪ್ರಿಪೇಯ್ಡ್ ಇನ್ಸ್‌ಟ್ರುಮೆಂಟ್‌ಗಳು,  ವ್ಯಾಲೆಟ್‌ಗಳು, ಫಾಸ್ಟ್‌ಟ್ಯಾಗ್‌ಗಳು, ಎನ್‌ಸಿಎಂಸಿ ಕಾರ್ಡ್‌ಗಳು ಇತ್ಯಾದಿಗಳಲ್ಲಿ ಯಾವುದೇ ಬಡ್ಡಿ, ಕ್ಯಾಶ್‌ಬ್ಯಾಕ್ ಅಥವಾ ಮರುಪಾವತಿಗಳನ್ನು ಹೊರತುಪಡಿಸಿ ಯಾವುದೇ ಸಮಯದಲ್ಲಿ ಕ್ರೆಡಿಟ್ ಮಾಡಬಹುದಾದ ಯಾವುದೇ ಹೆಚ್ಚಿನ ಠೇವಣಿ ಅಥವಾ ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್ ಅಪ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.ಆದರೆ, ಆ ಬಳಿಕ ಈ ಗಡುವನ್ನು ಮತ್ತೆ 15 ದಿನಗಳ ಕಾಲ ಅಂದರೆ ಮಾರ್ಚ್ 15ರವರೆಗೆ ವಿಸ್ತರಿಸಿತ್ತು.

ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು, ಇದೆಂಥಾ ಸರ್ಕಾರಿ ಆಸ್ಪತ್ರೆ!

ಆರ್ ಬಿಐ ನಿರ್ಬಂಧದ ಬಳಿಕ ಸಂಕಷ್ಟಕ್ಕೆ ಸಿಲುಕಿರುವ ಪೇಟಿಎಂ ಸಂಸ್ಥೆ, ತನ್ನ ಕ್ಯುಆರ್ ಕೋಡ್ ಹಾಗೂ ಸೌಂಡ್ ಬಾಕ್ಸ್ ಸೇವೆಗಳು ಮಾರ್ಚ್ 15ರ ನಂತರವೂ ಕಾರ್ಯನಿರ್ವಹಿಸಲಿದೆ ಎಂಬ ಭರವಸೆಯನ್ನು ಗ್ರಾಹಕರಿಗೆ ನೀಡಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪೇಟಿಎಂ ಸ್ಥಾಪಕ ಹಾಗೂ ಸಿಇಒ ವಿಜಯ್ ಶಂಕರ್ ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಆರ್ ಬಿಐ ಬಿಡುಗಡೆಗೊಳಿಸಿರುವ ನಿರಂತರ ಕೇಳಲಾಗುವ ಪ್ರಶ್ನಾವಳಿಗಳಲ್ಲಿ (ಎಫ್ ಎಕ್ಯು) ಈಗಾಗಲೇ ಮಾಹಿತಿ ನೀಡಿದ್ದು, ಕ್ಯುಆರ್ ಕೋಡ್ ಹಾಗೂ ಸೌಂಡ್ ಬಾಕ್ಸ್ ಹಾಗೂ ಇಡಿಸಿ ಬಳಕೆಗೆ ಯಾವುದೇ ಸಮಸ್ಯೆಯಿಲ್ಲ ಎಂಬ ಸ್ಪಷ್ಟನೆ ನೀಡಿದೆ. ಇನ್ನು ಈ ಟ್ವೀಟ್ ಜೊತೆಗೆ ಪೇಟಿಎಂ ಸಿಇಒ ಜಾಹೀರಾತನ್ನು ಕೂಡ ಹಂಚಿಕೊಂಡಿದ್ದು, ಅದರಲ್ಲಿ ಪೇಟಿಎಂ ಸಾಧನಗಳು ಹಾಗೂ ಕ್ಯುಆರ್ ಕೋಡ್ 'ಇಂದು, ನಾಳೆ, ಯಾವಾಗಲೂ' ಬಳಕೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!