ತೀರ್ಥದಲ್ಲಿ ನಿದ್ರೆಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ಚಾನೆಲ್‌ ನಿರೂಪಕಿಯ ರೇಪ್‌!

Published : May 16, 2024, 05:57 PM ISTUpdated : May 17, 2024, 01:10 PM IST
ತೀರ್ಥದಲ್ಲಿ ನಿದ್ರೆಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ಚಾನೆಲ್‌ ನಿರೂಪಕಿಯ ರೇಪ್‌!

ಸಾರಾಂಶ

ಖಾಸಗಿ ಟಿವಿ ಕಾರ್ಯಕ್ರಮದ ನಿರೂಪಕಿ ನೀಡಿದ ದೂರಿನ ಆಧಾರದ ಮೇಲೆ ವಿರುಗಂಬಾಕ್ಕಂ ಮಹಿಳಾ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಚೆನ್ನೈ (ಮೇ.16): ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಅವರು ವಿರುಗಂಬಾಕ್ಕಂ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ನಿದ್ರೆ ಬರುವ ಮಾತ್ರೆಯನ್ನ ತೀರ್ಥದಲ್ಲಿ ಬೆರೆಸಿದ್ದ ಅರ್ಚಕ ಅದನ್ನು ನನಗೆ ನೀಡಿದ್ದ ಆ ಬಳಿಕ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ನಿರೂಪಕಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ 30 ವರ್ಷದ ದಿವ್ಯಾ (ಹೆಸರು ಬದಲಾಯಿಸಲಾಗಿದೆ) ಸಾಲಿಗ್ರಾಮಮ್‌ ಮೂಲದವರಾಗಿದ್ದಾರೆ. ತಾವು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ಹೇಳಿದ್ದಾರೆ. ಚೆನ್ನೈನ ಪರ್ಯಾಸ್‌ ಪ್ರದೇಶದಲ್ಲಿರುವ ಪ್ರಸಿದ್ಧ  ಕಾಳಿಕಾಂಪಲ್ ದೇವಸ್ಥಾನಕ್ಕೆ ಸಾಮಾನ್ಯವಾಗಿ ಭೇಟಿ ನೀಡುತ್ತೇನೆ. ಈ ವೇಳೆ ಇದೇ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ಜೊತೆ ಸ್ನೇಹ ಸಂಬಂಧ ಬೆಳೆದಿತ್ತು ಎಂದು ತಿಳಿಸಿದ್ದಾರೆ.

ಇಬ್ಬರ ನಡುವೆ ಆತ್ಮೀಯ ಸ್ನೇಹ ಬೆಳೆದ ಬಳಿಕ ಕಾರ್ತಿಕ್‌ ಮುನಿಸ್ವಾಮಿ, ದೇವಸ್ಥಾನದಲ್ಲಿ ಆಗುವ ಕಾರ್ಯಕ್ರಮಗಳ ಬಗ್ಗೆ ಹಾಗೂ ವಿಶೇಷ ಪೂಜೆಗಳ ಬಗ್ಗೆ ವಾಟ್ಸ್‌ಆಪ್‌ ಮೂಲಕ ಸಂದೇಶಗಳನ್ನು ಕಳಿಸುತ್ತಿದ್ದ. ಆತ್ಮೀಯ ಸ್ಮೇಹಿತರಾಗಿದ್ದ ಕಾರಣ, ದಿವ್ಯಾ ದೇವಸ್ಥಾನಕ್ಕೆ ಬಂದಾಗೆಲ್ಲಾ ಆಕೆಯನ್ನು ದೇವರ ಗರ್ಭಗುಡಿಗೆ ಕರೆದುಕೊಂಡು ಹೋಗಿ ಕಾರ್ತಿಕ್‌ ಮುನಿಸ್ವಾಮಿ ವಿಶೇಷ ದರ್ಶನ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದಿನಗಳು ಕಳೆದ ಹಾಗೆ, ಒಂದು ದಿನ ನಾನು ದೇವಸ್ಥಾನಕ್ಕೆ ಬಂದಾಗ ಆತ ತನ್ನ ಬೆಂಜ್‌ ಕಾರ್‌ಅನ್ನು ಹೊರತೆಗೆದಿದ್ದ. ನನ್ನ ಮನೆಯ ಕಡೆಯಿಂದಲೇ ಪಾಸ್‌ ಆಗುತ್ತೇನೆ. ಇದೇ ವೇಳೆ ಮನೆಗೆ ಬಿಟ್ಟು ಹೋಗುತ್ತೇನೆ ಎಂದು ತಿಳಿಸಿದ್ದ ಎಂದು ದಿವ್ಯಾ ಹೇಳಿದ್ದಾರೆ. ಕಾರಿನಲ್ಲಿ ಕುಳಿತುಕೊಂಡು ಪ್ರಯಾಣ ಮಾಡುವ ವೇಳೆ ಆತ ನಿದ್ರೆ ಬರುವ ತೀರ್ಥವನ್ನು ನನಗೆ ನೀಡಿದ್ದ ಎಂದು ದಿವ್ಯಾ ಆರೋಪಿಸಿದ್ದಾರೆ. ಏಕೆಂದರೆ, ಇದನ್ನು ಕುಡಿದ ಬಳಿಕ, ನನಗೆ ಪ್ರಜ್ಞೆ ತಪ್ಪಿತ್ತು. ಆ ಬಳಿಕ ಆತ ನನ್ನ ಮೇಲೆ ಅತ್ಯಾಚಾರ ಮಾಡಿದ್ದ. ಅದಾದ ಬಳಿಕ ಕಾರ್ತಿಕ್‌ ಮುನಿಸ್ವಾಮಿ ನನ್ನನ್ನು ದೇವಸ್ಥಾನದಲ್ಲಿಯೇ ಮದುವೆಯಾಗುವುದಾಗಿಯೂ ಮಾತು ಕೊಟ್ಟಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದಾದ ಬಳಿಕ ಕಾರ್ತಿಕ್‌ ಮುನಿಸ್ವಾಮಿ ಸಾಕಷ್ಟು ಬಾರಿ ನನ್ನ ಮನೆಗೆ ಭೇಟಿ ನೀಡಿದ್ದ, ಆ ಬಳಿಕ ನಾನು ಗರ್ಭಿಣಿಯೂ ಆಗಿದ್ದೆ. ಇದು ಗೊತ್ತಾದ ಬಳಿಕ ನನ್ನನ್ನು ವಡಾಪಳನಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಆತ ಗರ್ಭಪಾತವನ್ನೂ ಮಾಡಿಸಿದ್ದ. ಆ ಬಳಿಕ ಆತ ನನಗೆ ಸೆಕ್ಸ್‌ ವರ್ಕ್‌ ಮಾಡುವಂತೆಯೂ ಒತ್ತಾಯ ಮಾಡಿದ್ದ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ರೇಪ್‌ ಕೇಸ್‌ನಲ್ಲಿ 8 ವರ್ಷ ಶಿಕ್ಷೆಗೆ ಒಳಗಾಗಿದ್ದ IPL ಕ್ರಿಕೆಟರ್‌ಗೆ ಗುಡ್‌ ನ್ಯೂಸ್‌, ಆರೋಪ ಖುಲಾಸೆಗೊಳಿಸಿದ ಕೋರ್ಟ್‌!

ಕಾರ್ತಿಕ್‌ ಮುನಿಸ್ವಾಮಿಯನ್ನ ಬಂಧಿಸಿದ ಪೊಲೀಸ್‌:  ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ ನೀಡಿದ ದೂರಿನ ಮೇಲೆ ವಿರುಗಂಬಾಕ್ಕಂ ಮಹಿಳಾ ಪೊಲೀಸ್‌ ಠಾಣೆಯ ಅಧಿಕಾರಿಗಳು ಕಾರ್ತಿಕ್‌ ಮುನಿಸ್ವಾಮಿಯನ್ನು ಬಂಧಿಸಿದ್ದಾರೆ. ಅದಲ್ಲದೆ, ಟಿವಿ ನಿರೂಪಕಿಯ ಜೊತೆಗಿನ ಕೆಲವು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಕೂಡ ಆತನ ಮೊಬೈಲ್‌ನಿಂದ ಪಡೆದುಕೊಂಡಿದ್ದಾರೆ. ಒಟ್ಟು ಆರು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಕಾರ್ತಿಕ್‌ ಮುನಿಸ್ವಾಮಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ತನ್ನ ಇಂಜಿನಿಯರಿಂಗ್‌ ವಿದ್ಯಾಭ್ಯಾಸ ಮುಗಿದ ಬಳಿಕ ದಿವ್ಯಾ, ಚೆನ್ನೈ ಮೂಲದ ಚಾನೆಲ್‌ನಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

ಗಂಡನ ಜತೆ ಜಗಳಕ್ಕೆ 3 ವರ್ಷದ ಮಗಳನ್ನು ಬೆಟ್ಟದ ಮೇಲೆ ಬಿಟ್ಟುಬಂದ ಅಮ್ಮ, ಹಸಿವಿನಿಂದ ಸಾವು ಕಂಡ ಮಗು!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!