ಬಕ್ರೀದ್ ಶಾಂತಿ ಸಭೆಯಲ್ಲೇ ಎರಡೂ ಗುಂಪುಗಳ ನಡುವೆ ಮಾರಾಮಾರಿ!

Published : Jun 14, 2024, 08:56 PM IST
ಬಕ್ರೀದ್ ಶಾಂತಿ ಸಭೆಯಲ್ಲೇ ಎರಡೂ ಗುಂಪುಗಳ ನಡುವೆ ಮಾರಾಮಾರಿ!

ಸಾರಾಂಶ

ಬಕ್ರೀದ್ ಹಬ್ಬದ ಪ್ರಯುಕ್ತ ಕರೆದಿದ್ದ ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಎರಡು ಗುಂಪುಗಳು ಗಲಾಟೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ನಡೆದಿದೆ.

ಕೊಪ್ಪಳ (ಜೂ.14): ಬಕ್ರೀದ್ ಹಬ್ಬದ ಪ್ರಯುಕ್ತ ಕರೆದಿದ್ದ ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಎರಡು ಗುಂಪುಗಳು ಗಲಾಟೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ನಡೆದಿದೆ.

ಬಕ್ರೀದ್ ಹಬ್ಬದ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ  ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆ ಶಾಂತಿ ಸಭೆ ಕರೆದಿತ್ತು. ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಮಾತನಾಡಲು ಮುಂದಾದಾಗ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಎರಡೂ ಗುಂಪುಗಳ ನಡುವೆ ಪೊಲೀಸರ ಮುಂದೆಯೇ ವಾಗ್ವಾದ ನಡೆದು ಮಾರಾಮಾರಿ ನಡೆಯಿತು.

ತ್ಯಾಗ, ಬಲಿದಾನವನ್ನು ಸ್ಮರಿಸುವ ಮುಸಲ್ಮಾನರ ಪವಿತ್ರ ಹಬ್ಬ ಈದುಲ್ ಅಝ್ಹಾ

ಹಾಲಿ ಶಾಸಕ, ಮಾಜಿ ಶಾಸಕರ ಬೆಂಬಲಿಗರಿಂದ ಶಾಂತಿಸಭೆಯಲ್ಲೇ ಮಾರಾಮಾರಿ ನಡೆದಿದೆ. ಇಕ್ಬಾಲ್ ಅನ್ಸಾರಿ ಬೆಂಬಲಿಗರಿಂದ ಅಲಿಖಾನ್ ಮೇಲೆ ಹಲ್ಲೆ ಮುಂದಾಗಿದ್ದರು ಎಂಬ ಆರೋಪ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ ಅಲಿಖಾನ್. ಶಾಂತಿ ಸಭೆಯಲ್ಲಿ ಮಾತನಾಡಲು ಅವಕಾಶ ಕೊಡದೇ ಹಲ್ಲೆ ಮುಂದಾಗಿದ್ದ ಅನ್ಸಾರಿ ಬೆಂಬಲಿಗರು.

ರಾಜಕೀಯವಾಗಿ ಹಾವು-ಮುಂಗುಸಿಯಂತಿರುವ ಜನಾರ್ದನ ರೆಡ್ಡಿ, ಇಕ್ಬಾಲ್ ಅನ್ಸಾರಿ. ಕಳೆದ ವಿಧಾನಸಭೆ, ಲೋಕಸಭಾ ಚುನಾವಣೆ ವೇಳೆ ಇಬ್ಬರು ನಾಯಕರು ಪರಸ್ಪರ ನಿಂದಿಸಿದ್ದರು. ಇದರಿಂದ ಇಬ್ಬರ ನಾಯಕರ ಬೆಂಬಲಿಗರ ನಡುವೆಯೂ ಅದೇ ವೈಷಮ್ಯ ಮುಂದುವರಿದಿದೆ. ಹೀಗಾಗಿ ಗಾಲಿ ಜನಾರ್ದನ್ ರೆಡ್ಡಿ ಆಪ್ತ ಅಲಿಖಾನ್‌ಗೆ ಮಾತನಾಡಲು ಅವಕಾಶ ಕೊಡದೇ ಮಾರಾಮಾರಿ ನಡೆದಿದೆ.

ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!