Bengaluru Mu*der Incident: ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ!

Kannadaprabha News, Ravi Janekal |   | Kannada Prabha
Published : Jun 24, 2025, 07:15 AM ISTUpdated : Jun 24, 2025, 12:57 PM IST
Bengaluru murder incident

ಸಾರಾಂಶ

ಮದ್ಯದ ಅಮಲಿನಲ್ಲಿ ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ತಲಘಟ್ಟಪುರದಲ್ಲಿ ನಡೆದ ಈ ಘಟನೆಯಲ್ಲಿ ನೇಪಾಳ ಮೂಲದ ಝರಿಲಾಲ್ ಮೃತಪಟ್ಟಿದ್ದು, ಆತನ ಸ್ನೇಹಿತ ಮಹೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು (ಜೂ.24) ಮದ್ಯದ ಅಮಲಿನಲ್ಲಿ ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೇಪಾಳ ದೇಶ ಝರಿಲಾಲ್ (70) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತ ಮಹೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂದೇ ಕಡೆ ವಾಸ ಮಾಡುತ್ತಿದ್ದ ಅವರುಮನೆಯಲ್ಲಿ ಭಾನುವಾರ ರಾತ್ರಿ ಸಾಂಬಾರು ತಯಾರಿಸುವ ವಿಚಾರವಾಗಿ ಝರಿಲಾಲ್ ಹಾಗೂ ಆತನ ಸ್ನೇಹಿತ ಮಹೇಂದ್ರನ ಮಧ್ಯೆ ಜಗಳ ಶುರುವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿ, ಚಪಾತಿ ಲಟ್ಟಣಗೆಯಿಂದ ಝರಿಲಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವು ದಿನಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಝರಿಲಾಲ್‌, ತಲಘಟ್ಟಪುರ ಸಮೀಪದ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಅದೇ ಸಂಸ್ಥೆಯ ಆ‍ವರಣದಲ್ಲಿ ಆತ ಕೆಲಸ ಮಾಡುತ್ತಿದ್ದ. ತನ್ನ ಗೆಳೆಯನ ಜತೆ ಭಾನುವಾರ ರಾತ್ರಿ ಝರಿಲಾಲ್‌ ಮದ್ಯ ಸೇವಿಸಿದ್ದಾನೆ. ಕಂಠ ಪೂರ್ತಿ ಮದ್ಯ ಸೇವಿಸಿದ ಬಳಿಕ ಸಾಂಬಾರು ತಯಾರಿಸುವ ವಿಚಾರದಲ್ಲಿ ಮನೆಯಲ್ಲಿ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ