ಕುಳಿತುಕೊಳ್ಳುವ ಕುರ್ಚಿ ವಿಚಾರಕ್ಕೆ ಕಿತ್ತಾಟ ಎಎಸ್ಐ ಮತ್ತು ಮುಖ್ಯ ಪೇದೆ ಅಮಾನತು

Published : Jul 19, 2024, 07:29 AM IST
ಕುಳಿತುಕೊಳ್ಳುವ ಕುರ್ಚಿ ವಿಚಾರಕ್ಕೆ ಕಿತ್ತಾಟ ಎಎಸ್ಐ ಮತ್ತು ಮುಖ್ಯ ಪೇದೆ ಅಮಾನತು

ಸಾರಾಂಶ

ತಮ್ಮ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ

ಬೆಂಗಳೂರು (ಜು.19) : ತಮ್ಮ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ.

ಪುಟ್ಟೇನಹಳ್ಳಿ ಠಾಣೆ(Puttenahalli police Station) ಸಹಾಯಕ ಸಬ್‌ ಇನ್‌ಸ್ಪೆಕ್ಟರ್ (ಎಎಸ್‌ಐ) ಮಂಜುನಾಥ್(Manjunath ASI) ಹಾಗೂ ಹೆಡ್ ಕಾನ್‌ಸ್ಟೇಬಲ್‌ ಅಂಜನಮೂರ್ತಿ ವಿರುದ್ಧ ಶಿಸ್ತು ಕ್ರಮವಾಗಿದ್ದು, ಎರಡು ದಿನಗಳ ಹಿಂದೆ ಠಾಣೆಯಲ್ಲಿ ಕುರ್ಚಿ ವಿಚಾರವಾಗಿ ಎಎಸ್‌ಐ ಮತ್ತು ಎಚ್‌ಸಿ ಜಗಳವಾಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಇನ್‌ಸ್ಪೆಕ್ಟರ್‌ ರವಿಕುಮಾರ್ ಅವರು, ಆಶಿಸ್ತು ತೋರಿದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್‌ ಜಗಲಾಸರ್‌ ಅವರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಹಿನ್ನೆಲೆಯಲ್ಲಿ ಎಎಸ್‌ ಹಾಗೂ ಎಚ್‌ಸಿ ವಿರುದ್ಧ ಡಿಸಿಪಿ ಶಿಸ್ತು ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ.

ಅಪಘಾತವಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ತಮ್ಮ ವಾಹನ ಬಳಸಲು ಹಿಂಜರಿದ ಹೊಯ್ಸಳ ಸಿಬ್ಬಂದಿ!

ಹಲವು ದಿನಗಳಿಂದ ಎಎಸ್‌ಐ ಮಂಜುನಾಥ್ ಹಾಗೂ ಎಚ್‌ಸಿ ಅಂಜನಮೂರ್ತಿ ಮಧ್ಯೆ ಮನಸ್ತಾಪವಿತ್ತು. ಕಳೆದ ಮಂಗಳವಾರ ಠಾಣೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಈ ಇಬ್ಬರ ಮಧ್ಯೆ ಜಗಳವಾಗಿದೆ. ಆಗ ‘ನಾನು ಸೇವಾ ಹಿರಿತನದಲ್ಲೇ ಹಿರಿಯವನು. ನನ್ನ ಆದೇಶ ನೀನು ಪಾಲಿಸಬೇಕು’ ಎಂದು ಎಚ್‌ಸಿಗೆ ಎಎಸ್‌ಐ ಹೇಳಿದ್ದಾರೆ. ಇದಕ್ಕೆ ಆಕ್ಷೇಪಿಸಿದ ಎಚ್‌ಸಿ, ‘ನಾನು ಸೇವಾ ಹಿರಿತನ ಹೊಂದಿದ್ದೇನೆ’ ಎಂದಿದ್ದಾರೆ. ಕೊನೆಗೆ ಇತರೆ ಸಿಬ್ಬಂದಿ ಮಧ್ಯೆಪ್ರವೇಶಿಸಿ ಜಗಳ ಬಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.

 ಈ ಗಲಾಟೆ ನಡೆದ ಸಂದರ್ಭದಲ್ಲಿ ವಿಧಾನಸಭಾ ಅಧಿವೇಶನದ ಕರ್ತವ್ಯದಲ್ಲಿ ಇನ್‌ಸ್ಪೆಕ್ಟರ್‌ ರವಿಕುಮಾರ್ ನಿರತರಾಗಿದ್ದರು. ಠಾಣಾಧಿಕಾರಿ ಇಲ್ಲದ ವೇಳೆ ಸಿಬ್ಬಂದಿ ಗಲಾಟೆ ಮಾಡಿಕೊಂಡಿದ್ದಾರೆ.ಪೊಲೀಸರಲ್ಲಿ ಯಾವುದೇ ಕಾರಣಕ್ಕೂ ಅಶಿಸ್ತು ಸಹಿಸುವುದಿಲ್ಲ. ಠಾಣೆಯಲ್ಲಿ ಅಶಿಸ್ತು ತೋರಿರುವ ಸಿಬ್ಬಂದಿಗೆ ಕಾನೂನು ಅನುಸಾರ ಕ್ರಮವಾಗಿದೆ.

-ಲೋಕೇಶ್ ಜಗಲಾಸರ್‌, ಡಿಸಿಪಿ, ದಕ್ಷಿಣ ವಿಭಾಗ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!