Davanagere crime: ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಜಗಳ; ಒಬ್ಬನಿಗೆ ಚಾಕು ಇರಿತ

Published : Dec 07, 2022, 09:17 AM IST
Davanagere crime:  ಕ್ಷುಲ್ಲಕ ಕಾರಣಕ್ಕೆ  ಯುವಕರಿಬ್ಬರ ಜಗಳ; ಒಬ್ಬನಿಗೆ ಚಾಕು ಇರಿತ

ಸಾರಾಂಶ

ಪಟ್ಟಣದ ಜಿಗಳಿ ವೃತ್ತದಲ್ಲಿನ ಸಾಯಿ ಬೇಕರಿಯಲ್ಲಿ ಯುವಕರಿಬ್ಬರ ಜಗಳದಲ್ಲಿ ಒಬ್ಬನಿಗೆ ಚಾಕು ಇರಿತಕ್ಕೆ ಒಳಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಹಾಗೂ ಅಧಿಕಾರಿಗಳು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಘಟನೆ ಬಗ್ಗೆ ಮಾಹಿತಿ ಪಡೆದರು.

ಮಲೇಬೆನ್ನೂರು (ಡಿ.7) : ಪಟ್ಟಣದ ಜಿಗಳಿ ವೃತ್ತದಲ್ಲಿನ ಸಾಯಿ ಬೇಕರಿಯಲ್ಲಿ ಯುವಕರಿಬ್ಬರ ಜಗಳದಲ್ಲಿ ಒಬ್ಬನಿಗೆ ಚಾಕು ಇರಿತಕ್ಕೆ ಒಳಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಹಾಗೂ ಅಧಿಕಾರಿಗಳು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಘಟನೆ ಬಗ್ಗೆ ಮಾಹಿತಿ ಪಡೆದರು.

ಹರಿಹರ ತಾಲೂಕು ಮಲೇಬೆನ್ನೂರು ಗ್ರಾಮದ ಮಹಮ್ಮದ್‌ ಇರ್ಫಾನ್‌(24 ವರ್ಷ) ಇರಿತಕ್ಕೆ ಒಳಗಾಗಿದ್ದ ಯುವಕ. ಪಟ್ಟಣದ ಸಾಯಿ ಬೇಕರಿ ಬಳಿ ಅಭಿಷೇಕ್‌ ಎಂಬ ಯುವಕನ ಜೊತೆಗೆ ಜಗಳವಾಗಿದ್ದು, ಈ ಸಂದರ್ಭದಲ್ಲಿ ಇರ್ಫಾನ್‌ ಚಾಕು ಇರಿತಕ್ಕೆ ಒಳಗಾಗಿದ್ದ. ಅಭಿಷೇಕನಿಗೆ ಕಣ್ಣಿಗೆ ಗಾಯವಾಗಿದೆ. ಇರ್ಫಾನ್‌ನ್ನು ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದ. ಮಲೇಬೆನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕುಡಿದ ಮತ್ತಲ್ಲಿ ಮೂವರ ಮೇಲೆ ಹಲ್ಲೆ; ಬುದ್ಧಿ ಹೇಳಿದ್ದಕ್ಕೆ ಚಾಕು ಇರಿತ..!

ಕಳೆದ ರಾತ್ರಿಯೇ ಮಲೆಬೆನ್ನೂರು ಪಟ್ಟಣಕ್ಕೆ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದ ಎಸ್ಪಿ ಸಿ.ಬಿ.ರಿಷ್ಯಂತ್‌ ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳು ಇರ್ಫಾನ್‌ ಆರೋಗ್ಯವನ್ನು ವಿಚಾರಿಸಿ, ಯಾವುದೇ ಅಪಾಯವಿಲ್ಲವೆಂಬ ಸಂಗತಿಯನ್ನು ಆಸ್ಪತ್ರೆಯ ವೈದ್ಯರಿಂದ ಖಚಿತಪಡಿಸಿಕೊಂಡರು. ಗಾಯಾಳು ಯುವಕ ಹಾಗೂ ಆತನ ಸಂಬಂಧಿಕರಿಂದ ಮಾಹಿತಿ ಪಡೆದರು.

ಇರ್ಫಾನ್‌ ಇತರರ ಮೇಲೆ ಪ್ರತಿ ದೂರು:

ಈ ವಿಚಾರ ಕುರಿತು ಸಾಯಿ ಬೇಕರಿಯಲ್ಲಿ ಟೀ-ಶರ್ಚ್‌ ಹರಿದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಸಂಜೀವ ಕುಮಾರ್‌ ಎಂಬಾತನು ಇರ್ಫಾನ್‌, ಅಸೀಫ್‌ ಮತ್ತು ಇತರರ ಮೇಲೆ ಮಂಗಳವಾರ ಪ್ರತಿದೂರು ದಾಖಲಿಸಿದ್ದಾನೆ ಎಂದು ವೃತ್ತ ನಿರೀಕ್ಷಕ ಸತೀಶ್‌ ತಿಳಿಸಿದ್ದಾರೆ.

 

Belagavi: ಬಾಲಕಿ ಚುಡಾಯಿಸಿದ್ದನ್ನು ಪ್ರಶ್ನಿಸಿದ ನಾಲ್ವರಿಗೆ ಚಾಕು ಇರಿತ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠ ಸಿ.ಬಿ.ರಿಷ್ಯಂತ್‌, ಸಾಮಾಜಿಕ ಜಾಲತಾಣಗಳಲ್ಲಿ ಯಾರಾದರೂ ಸುಳ್ಳು ಮಾಹಿತಿ ಹರಡಿದರೆ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂಜಾಗ್ರತೆಯಾಗಿ ಮಲೇಬೆನ್ನೂರು ಪಟ್ಟಣ, ಹರಿಹರದಲ್ಲಿ ಪೊಲೀಸ್‌ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಜನತೆಗೆ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!