ಶಿವಾಜಿನಗರ ಇನ್ಸ್‌ಪೆಕ್ಟರ್‌ ಮೇಲೆ ಅದೇ ಠಾಣೆಯಲ್ಲಿ ಎಫ್ಐಆರ್!

Published : Mar 09, 2020, 05:57 PM ISTUpdated : Mar 09, 2020, 09:28 PM IST
ಶಿವಾಜಿನಗರ ಇನ್ಸ್‌ಪೆಕ್ಟರ್‌ ಮೇಲೆ ಅದೇ ಠಾಣೆಯಲ್ಲಿ ಎಫ್ಐಆರ್!

ಸಾರಾಂಶ

ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮೇಲೆ ಅದೇ ಠಾಣೆಯಲ್ಲಿ ಎಫ್ ಐ ಆರ್/ ವ್ಯಕ್ತಿಯೊಬ್ಬರನ್ನು ವಿಚಾರಣೆಗೆ ಕರೆಸಿ ಗಂಭೀರ ಹಲ್ಲೆ ಮಾಡಿದ ಆರೋಪ/ ಶಿವಾಜಿನಗರ ಇನ್ಸ್ ಪೆಕ್ಟರ್ ಮೇಲೆ ಎಫ್ ಐ ಆರ್

ಬೆಂಗಳೂರು(ಮಾ. 09)  ಇದೊಂದು ವಿಚಿತ್ರ ರೀತಿಯ ಪ್ರಕರಣ. ಅದೇ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಅದೇ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಶಿವಾಜಿನಗರ ಠಾಣೆಯ ಇನ್ಸ್ ಪೆಕ್ಟರ್ ವಿರುದ್ಧವೇ ಶಿವಾಜಿನಗರ ಠಾಣೆಯಲ್ಲೆ ಎಫ್ ಐ ಆರ್ ದಾಖಲಾಗಿದೆ.

ಶಿವಾಜಿನಗರ ಠಾಣೆ ಇನ್ಸ್ಪೆಕ್ಟರ್ ಜಿ. ಸಿದ್ದರಾಜು ಹಾಗೂ ಇತರೆ ನಾಲ್ಕು ಪೊಲೀಸರ ಮೇಲೆ ದೂರು ದಾಖಲಾಗಿದೆ. ಜನವರಿಯಲ್ಲಿ ಈ ದೂರು ದಾಖಲಾಗಿದೆ.

ಸ್ನೇಹಿತರಿಗೆ ಎಣ್ಣೆ ಪಾರ್ಟಿ ಕೊಟ್ಟು ಹೆಣವಾಗಿ ಹೋದ ಮೈಸೂರು ಆನಂದ

ಏನಿದು ಪ್ರಕರಣಳ:  ವಸೀಂ ಪಾಷ ಎಂಬುವರು ನೀಡಿರುವ ದೂರಿನ ಆಧಾರದಲ್ಲಿ ಎಫ್ ಐಆರ್ ದಾಖಲಾಗಿದೆ ವಸೀಂ‌ ಮೇಲೆ ಮಾರಾಣಂತಿಕ‌ ಹಲ್ಲೆ ಮಾಡಿದ ಆರೋಪವನ್ನು ಠಾಣಾಧಿಕಾರಿ ಎದುರಿಸುತ್ತಿದ್ದಾರೆ

ವಿಚಾರಣೆಗೆ ಕರೆಸಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲ ದಿನಗಳ ಹಿಂದೆ ಪ್ರಕರಣವೊಂದರ ಸಂಬಂಧ ವಸೀಂ ಪಾಷಾ ಅವರನ್ನು ಠಾಣೆಗೆ ಕರೆಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು.ಈ ವೇಳೆ ವಸೀಂ ಪಾಷಾ ತಲೆಗೆ ಬಲವಾಗಿ ದೊಣ್ಣೆಯಿಂದ ಹೊಡೆದಿದ್ದಾರೆ. ಈ ಬಗ್ಗೆ ಕಮೀಷನರ್ ಹಾಗೂ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದ ವಸೀಂ ಪಾಷಾ ದೂರು ಸಲ್ಲಿಸಿದ್ದು  ನ್ಯಾಯಾಲಯದ ನಿರ್ದೇಶನದಂತೆ ಇನ್ಸ್ ಪೆಕ್ಟರ್ ಸಿದ್ದರಾಜು ಹಾಗೂ ನಾಲ್ವರು ಪೊಲೀಸರ ಮೇಲೆ ಎಫ್ ಐ ಆರ್ ದಾಖಲಾಗಿದೆ.

News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ