
ಜೈಪುರ(ಏ.04) ದಲಿತ ಮಹಿಳೆ ಮೇಲೆ ಸಾಮೂಹಿತ ಅತ್ಯಾಚಾರ ನಡೆದಿದೆ. ರಕ್ಕಸ ಕಾಮುಕರು ಆಕೆಯ ಮೇಲೆರಗಿ ಕಾಮ ತೃಷೆ ತೀರಿಸಿಕೊಂಡಿದ್ದಾರೆ. ಹಲ್ಲೆ, ಬೆದರಿಕೆ ಬಳಿಕ ಮಹಿಳೆಯನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ. ಮಾನಸಿಕ, ದೈಹಿಕ ಆಘಾತದಲ್ಲಿರುವ ಈ ದಲಿತ ಮಹಿಳೆ ಧೈರ್ಯ ಮಾಡಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. ಆದರೆ ಜಿಲ್ಲಾ ನ್ಯಾಯಾಲಯದ ಜಡ್ಜ್ ಮುಂದೆ ಹೇಳಿಕೆ ದಾಖಲಿಸಲು ತೆರಳಿದ ಮಹಿಳೆಗೆ ಆಘಾತವಾಗಿದೆ. ದೇಹದ ಗಾಯದ ಗುರುತು ಪರಿಶೀಲಿಸಲು ಬಟ್ಟೆ ಬಿಚ್ಚಲು ಹೇಳಿದ ಘಟನೆ ರಾಜಸ್ಥಾನದ ಹಿಂದ್ವಾನ್ ಸಿಟಿ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ನಡೆದಿದೆ. ಜಡ್ಜ್ ವಿರುದ್ಧ ಸೆಕ್ಷನ್ 345ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದ್ವಾನ್ ಸಿಟಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ರವೀಂದ್ರ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ. ಸೆಕ್ಷನ್ 345 ಜೊತೆಗೆ ದಲತಿ ದೌರ್ಜನ್ಯ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಾಗಿದೆ. ಮಾರ್ಚ್ 30ರಂದು ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅನೈತಿಕ ಸಂಬಂಧ ರಟ್ಟಾಗುತ್ತಿದ್ದಂತೆ ವಿದ್ಯುತ್ ಕಂಬ ಹತ್ತಿದ ಪತ್ನಿ, ಹೈಡ್ರಾಮಕ್ಕೆ ಗ್ರಾಮಸ್ಥರು ಸುಸ್ತು!
ಹಿಂದ್ವಾನಿ ಸಿಟಿ ಆವರಣದಲ್ಲಿನ ದಲಿತ ಮಹಿಳೆ ಮೇಲೆ ಮಾರ್ಚ್ 30ರ ಸಂಜೆ ವೇಳೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಕಾಮುಕರು ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಾರ್ಚ್ 30 ರಾತ್ರಿ ಘಟನೆಯಿಂದ ಕುಗ್ಗಿಹೋದ ದಲಿತ ಮಹಿಳೆ ಕಾಮುಕರಿಗೆ ತಕ್ಕ ಪಾಠ ಕಲಿಸಲು ಧೈರ್ಯ ಮಾಡಿ ದೂರು ದಾಖಲಿಸಿದ್ದಾಳೆ. ಪ್ರಕರಣ ವಿಚಾರಣೆಯೂ ಆರಂಭಗೊಂಡಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಜಡ್ಜ್ ಮುಂದೆ ಮಹಿಳೆಯ ಹೇಳಿಕೆ ದಾಖಲಿಸಲು ಮಹಿಳೆಗ ಸೂಚಿಸಲಾಗಿತ್ತು.
ಜಡ್ಜ್ ಮುಂದೆ ಹೇಳಿಕೆ ದಾಖಲಿಸಿ ಹೊರಬಂದ ಮಹಿಳೆಯನ್ನು ಮತ್ತೆ ಕರೆಸಿಕೊಳ್ಳಲಾಗಿದೆ. ರೇಪ್ ವೇಳೆ ದೇಹದ ಮೇಲೆ ಆಗಿರುವ ಗಾಯವನ್ನು ಪರಿಶೀಲಿಸಬೇಕು ಎಂದ ಜಡ್ಜ್ ಬಟ್ಟೆ ಬಿಚ್ಚಲು ಹೇಳಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ. ನಾನು ಬಟ್ಟೆ ಬಿಚ್ಚಲು ನಿರಾಕರಿಸಿದೆ. ಮಹಿಳಾ ಸಿಬ್ಬಂದಿಗಳಿದ್ದರೆ ನಾನು ಬಚ್ಚೆ ಬಿಚ್ಚಿ ಗಾಯದ ಗುರುತು ತೋರಿಸುತ್ತಿದ್ದೆ, ಆದರೆ ಜಡ್ಜ್ ಮುಂದೆ ಗಾಯದ ಗುರುತು ತೋರಿಸಲು ನಿರಾಕರಿಸಿದ್ದೇನೆ ಎಂದು ಎಫ್ಐಆರ್ನಲ್ಲಿ ಹೇಳಿದ್ದಾರೆ. ಇದೀಗ ಜಡ್ಜ್ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ.
ಬೆಂಗಳೂರು: ರಾಯಚೂರಿನಿಂದ ಕೆಲಸಕ್ಕೆ ಬಂದ ಮಹಿಳೆ ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ