
ಉಡುಪಿ(ಮಾ. 07) ಪೇಜಾವರ ಮಠದಲ್ಲಿ ಭಾನುವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು.
ಉಡುಪಿಯ ರಥಬೀದಿಯಲ್ಲಿ ಇರುವ ಪೇಜಾವರ ಮಠದಲ್ಲಿ ಎಸಿಯಲ್ಲಿನ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪರಿಣಾಮ ಯಾವುದೇ ರೀತಿಯಲ್ಲಿ ಮಠದ ಸೊತ್ತುಗಳಿಗೆ ಹಾನಿಯಾಗಿಲ್ಲ.
ಹಸು ರಕ್ಷಣೆಗೆ ಹೋಗಿ ಬೆಂಕಿಗೆ ಆಹುತಿಯಾದ ಯುವಕ
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾದಾಗ, ವೋಲ್ಟೇಜ್ ಪ್ರಮಾಣ ಕಡಿಮೆ ಅಥವಾ ಜಾಸ್ತಿ ಬಂದರೆ, ಹೆವಿ ಮೋಟಾರ್ ಇರುವ ಯಂತ್ರಗಳನ್ನು ಮನೆಯ ವೈರಿಂಗ್ ಗೆ ಹಾಕಿದರೆ ಈ ರೀತಿ ಶಾರ್ಟ್ ಸರ್ಕ್ಯೂಟ್ ಆಗಬಹುದು. ಮಳೆ ಅಥವಾ ಇಬ್ಬನಿ ಕಾರಣಕ್ಕೆ ತುಕ್ಕು ಬಂದಿದ್ದು ವಿದ್ಯುತ್ ಸಂಚಾರ ಆದಾಗಲೂ ಈ ರೀತಿ ಆಗಬಹುದು.
ಕೆಲ ದಿನಗಳ ಹಿಂದೆ ಸಾಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಚಲಿಸುತ್ತಿದ್ದ ಮಾರುತಿ ಓಮ್ನಿ ಗ್ಯಾಸ್ ಕಿಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡ ತಪ್ಪಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ