ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಸದ್ದು: ಇನ್ನೂ ಮುಗಿಯದ ರಕ್ತ ಚರಿತ್ರೆ..!

Published : Nov 02, 2020, 05:36 PM ISTUpdated : Nov 02, 2020, 05:58 PM IST
ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಸದ್ದು: ಇನ್ನೂ ಮುಗಿಯದ ರಕ್ತ ಚರಿತ್ರೆ..!

ಸಾರಾಂಶ

 ಭೀಮಾತೀರದಲ್ಲಿ ಮತ್ತೆ ಬಂದೂಕು ಗುಂಡಿನ ಸದ್ದು ಮಾಡಿದೆ. ಹಳೇ ವೈಷಮ್ಯಗಳಿಂದ ರಕ್ತ ಚರಿತ್ರೆ ಇನ್ನೂ ಮುಗಿದಿಲ್ಲ ಅನಿಸುತ್ತೆ. 

ವಿಜಯಪುರ, (ನ.02): ಭೀಮಾ ತೀರದ ಕುಖ್ಯಾತ ಮಹಾದೇವ ಭೈರಗೊಂಡನ ಮೇಲೆ ಇಂದು (ಸೋಮವಾರ) ಅಪರಿಚಿತರು ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿ ತಾಂಡಾ ಬಳಿ ನಡೆದ ಘಟನೆ

"

ಭೀಕರವಾಗಿ ಗಾಯಗೊಂಡಿರುವ ಮಹಾದೇವ ಹಾಗೂ ಬಾಬುರಾಯ ಎನ್ನುವವರನ್ನ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪರಿಚಿತರ ತಂಡವೊಂದು ಮೊದಲು ಮಹಾದೇವ ಸಾಹುಕಾರ ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್‌ನಿಂದ ಡಿಕ್ಕಿ ಗುದ್ದಿದ್ದಾರೆ. 

ಭೀಮಾ ತೀರದಲ್ಲಿ ಮತ್ತೆ ಧರ್ಮನ ಹೆಸರು, ವಸೂಲಿಗೆ ಇಳಿದ ತಂಡ ಸಿಕ್ಕಿಬಿತ್ತು!

ಬಳಿಕ ಏಕಾಏಕಿ ಗುಂಡಿನ ದಾಳಿ ಎಂದು ತಿಳಿದುಬಂದಿದೆ. ಗುಂಡಿನ ದಾಳಿ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಚಡಚಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯಕ್ಷದರ್ಶಿ ಹೇಳಿಕೆ
ನೋಡನೋಡುತ್ತಿದ್ದಂತೆ 20 ಜನರ ತಂಡ ದಾಳಿ ನಡೆದಿದೆ. ಅವರ ಕಯ್ಯಲ್ಲಿ ಬಂದೂಕುಗಳಿದ್ದವು. ಎರೆಡು ಟಿಪ್ಪರ್ ಮೂಲಕ ಸಾಹುಕಾರ್ ಕಾರು ನಿಲ್ಲಿಸಿ ಪೈರಿಂಗ್ ಮಾಡಿದ್ದಾರೆ. ಕಳೆದ ಎರೆಡು ದಿನಗಳಿಂದ ಹೊಡೆಯೋದಕ್ಕೆ ಪ್ಲಾನ್ ಹಾಕಿದ್ದರು. ಊರಲ್ಲಿ ಸಾಹುಕಾರನ್ನ ವಾಚ್ ಮಾಡಿದ್ದರು ಎಂದು ಪ್ರತ್ಯಕ್ಷದರ್ಶಿ ತಮ್ಮಾರಾವ್ ಬೈರಗೊಂಡ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು