ಯುಗಾದಿ ಹಬ್ಬದಂದು ಕರಾವಳಿಯಲ್ಲಿ ದೋಣಿ ದುರಂತ!

By Suvarna NewsFirst Published Apr 13, 2021, 3:15 PM IST
Highlights

ಯಗಾದಿ ಹಬ್ಬದಂದೇ ಕರಾವಳಿ ಭಾಗದಲ್ಲಿ ಭಾರೀ ದುರಂತ ಸಂಭವಿಸಿದೆ. ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌‌ ಅಪಘಾತವಾಗಿದೆ.

ಮಂಗಳೂರು, (ಏ.13):  ಕರಾವಳಿಯ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌ ಅಪಘಾತವಾಗಿದ್ದು, ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. 12 ಮಂದಿ ನಾಪತ್ತೆಯಾಗಿದ್ದಾರೆ.

ಮಂಗಳೂರು ಬಂದರಿನಿಂದ 43 ನಾಟೆಕಲ್‌ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹಾಗೂ ಬಂಗಾಳದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್‌ ಕೇರಳದ ಕೋಯಿಕ್ಕೋಡ್‌ ಜಿಲ್ಲೆಯ ಬೇಪೋರ್‌ನಿಂದ ಹೊರಟಿದ್ದು, ಮಂಗಳೂರು ಬಂದರಿನಿಂದ ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌‌ ಅಪಘಾತವಾಗಿದೆ.

ದೋಣಿ ಮಗುಚಿ 6 ಮಂದಿ ಕಾಣೆ : ಇಬ್ಬರ ಮೃತ​ದೇಹ ಪತ್ತೆ

ಕರಾವಳಿ‌ ಕಾವಲು ಪಡೆಯ ಮೂರು ಹಡಗು ಹಾಗೂ ಏರ್‌‌ ಕ್ರಾಫ್ಟ್‌ ಮೂಲಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರೆದಿದೆ.

ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

In a swift sea-air operation deployed 03 ships & aircraft to search for 14 fishermen of IFB ‘Rabah’ approx 43 NM west . 02 crew found, search for other crew in progress.

— Indian Coast Guard (@IndiaCoastGuard)

ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ.

click me!