ಬೆಂಗಳೂರು: ಪದೇ ಪದೇ ಡ್ರಗ್ಸ್‌ ಕೇಸಲ್ಲಿ ಫಿಟ್‌: ಪಿಐಟಿ-ಎನ್ಡಿಪಿಎಸ್‌ ಅಡಿ ಬಂಧನ; ಏನಿದು ಕಾಯ್ದೆ?

Published : Feb 22, 2024, 07:00 AM IST
ಬೆಂಗಳೂರು: ಪದೇ ಪದೇ ಡ್ರಗ್ಸ್‌ ಕೇಸಲ್ಲಿ ಫಿಟ್‌: ಪಿಐಟಿ-ಎನ್ಡಿಪಿಎಸ್‌ ಅಡಿ ಬಂಧನ; ಏನಿದು ಕಾಯ್ದೆ?

ಸಾರಾಂಶ

ಪದೇ ಪದೇ ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಮಾದಕವಸ್ತುಗಳ ಅಕ್ರಮ ಸಾಗಾಣೆ ತಡೆ ಕಾಯ್ದೆ(ಪಿಐಟಿ-ಎನ್‌ಡಿಪಿಎಸ್‌) ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಂಗಳೂರು (ಫೆ.22): ಪದೇ ಪದೇ ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಮಾದಕವಸ್ತುಗಳ ಅಕ್ರಮ ಸಾಗಾಣೆ ತಡೆ ಕಾಯ್ದೆ(ಪಿಐಟಿ-ಎನ್‌ಡಿಪಿಎಸ್‌) ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ.

ರಿಚ್ಮಂಡ್‌ ಟೌನ್‌ನ ಅಮೀರ್‌ ಖಾನ್‌ (35) ಬಂಧಿತ ಡ್ರಗ್ಸ್‌ ಪೆಡ್ಲರ್‌. ಈತ ಕಳೆದ ಮೂರು ವರ್ಷಗಳಿಂದ ಕೇರಳ ಮತ್ತು ಆಂಧ್ರಪ್ರದೇಶದಿಂದ ಗಾಂಜಾ ಮತ್ತು ಇತರೆ ಮಾದಕವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಈ ಹಿಂದೆ ಸಿಸಿಬಿ ಪೊಲೀಸರು ಮೂರು ಬಾರಿ ಮಾಲು ಸಹಿತ ಬಂಧಿಸಿದ್ದರು. ಅಶೋಕನಗರ, ಪರಪ್ಪನ ಅಗ್ರಹಾರ, ಬೇಗೂರು, ಗೋವಿಂದಪುರ ಪೊಲೀಸ್‌ ಠಾಣೆಗಳಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿತ್ತು.

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ, 43 ಚಾಲಕರ ವಿರುದ್ಧ ಕೇಸ್‌

ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಮಾದಕವಸ್ತು ಮಾರಾಟ ದಂಧೆ ಮುಂದುವರೆಸಿದ್ದ. 2021ರಿಂದ 2023ರ ರವರೆಗೆ ಈತನ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿ ಅಮಿರ್‌ ಖಾನ್‌ನನ್ನು ಬಂಧಿಸಿದ್ದರು. ಈಶಾನ್ಯ ವಿಭಾಗದ ಡಿಸಿಪಿ ಅವರ ಸೂಚನೆ ಮೇರೆಗೆ ಪಿಐಟಿ-ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರತಿಬಂಧಕ ಬಂಧನದಲ್ಲಿರಿಸಲು ಪೂರಕ ದಾಖಲೆಗಳೊಂದಿಗೆ ಪೊಲೀಸ್‌ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ ನಗರ ಪೊಲೀಸ್‌ ಆಯುಕ್ತರು ಈತನ ಬಂಧನಕ್ಕೆ ಆದೇಶಿಸಿದ್ದರು. ಈ ಆದೇಶದ ಮೇರೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಫೆ.19ರಿಂದ ಅನ್ವಯವಾಗುವಂತೆ ಪಿಐಟಿ-ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರತಿಬಂಧಕ ಬಂಧನ ಜಾರಿಗೊಳಿಸಿದ್ದಾರೆ.

ಪದೇಪದೆ ರೂಲ್ಸ್ ಬ್ರೇಕ್ ಮಾಡ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್; ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ!

ಏನಿದು ಪಿಐಟಿ-ಎನ್‌ಡಿಪಿಎಸ್‌ ಕಾಯ್ದೆ?

ಪದೇ ಪದೇ ಮಾದಕವಸ್ತುಗಳ ಮಾರಾಟ ದಂಧೆಯಲ್ಲಿ ತೊಡಗುವ ರೂಢಿಗತ ಡ್ರಗ್ಸ್‌ ಪೆಡ್ಲರ್‌ಗಳನ್ನು ನಿಯಂತ್ರಿಸಲು ಮಾದಕವಸ್ತುಗಳ ಅಕ್ರಮ ಸಾಗಾಣೆ ತಡೆ ಕಾಯ್ದೆ(ಪಿಐಟಿ-ಎನ್‌ಡಿಪಿಎಸ್‌) ಜಾರಿಗೆ ತರಲಾಗಿದೆ. ಈ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದರೆ ಗೂಂಡಾ ಕಾಯ್ದೆ ಮಾದರಿಯಲ್ಲಿ ಆರೋಪಿಗೆ ಕನಿಷ್ಠ 1 ವರ್ಷ ಜಾಮೀನು ಸಿಗುವುದಿಲ್ಲ. ಹೀಗಾಗಿ ಆರೋಪಿಯು ಒಂದು ವರ್ಷದ ಜೈಲಿನಲ್ಲೇ ಇರಬೇಕಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ