ಕಾಸರಗೋಡಿನ ವೈದ್ಯ ನಿಗೂಢ ಸಾವು: ಕೇರಳ ಪೊಲೀಸರಿಂದ ಐವರ ಬಂಧನ

Published : Nov 11, 2022, 01:50 PM IST
ಕಾಸರಗೋಡಿನ ವೈದ್ಯ ನಿಗೂಢ ಸಾವು: ಕೇರಳ ಪೊಲೀಸರಿಂದ ಐವರ ಬಂಧನ

ಸಾರಾಂಶ

ಕಾಸರಗೋಡು ಜಿಲ್ಲೆಯ ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರು ನಿಗೂಢವಾಗಿ ಮೃತಪಟ್ಟ ಪ್ರಕರಣದಲ್ಲಿ ಐದು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು (ನ.11): ಕಾಸರಗೋಡು ಜಿಲ್ಲೆಯ ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರು ನಿಗೂಢವಾಗಿ ಮೃತಪಟ್ಟ ಪ್ರಕರಣದಲ್ಲಿ ಐದು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಅಡಿಕೆ ವ್ಯಾಪಾರಿ ಹಾಗೂ ಮುಸ್ಲಿಂ ಲೀಗ್ ಕುಂಬ್ಡಾಜೆ ಪಂಚಾಯತ್ ಕಾರ್ಯದರ್ಶಿ ಅಲಿ ತುಪ್ಪಕಲ್ಲು, ಮುಸ್ಲಿಂ ಲೀಗ್ ಬದಿಯಡ್ಕ ಪಂಚಾಯತು ಪದಾಧಿಕಾರಿ ಮುಹಮ್ಮದ್ ಹನೀಫ ಯಾನೆ ಅನ್ವರ್, ಕುಂಬ್ಡಾಜೆ ನಿವಾಸಿ ಅಶ್ರಫ್,ಅನ್ನಡ್ಕ ನಿವಾಸಿ ಮುಹಮ್ಮದ್ ಶಿಯಾಬುದ್ದೀನ್, ವಿದ್ಯಾಗಿರಿ ಮುನಿಯೂರು ನಿವಾಸಿ ಉಮರುಲ್ ಫಾರೂಕ್ ಬಂಧಿತರು. 

ಅಲಿ ಹಾಗೂ ಅನ್ವರ್ ನೇತೃತ್ವದಲ್ಲಿ ಡಾ.ಕೃಷ್ಣಮೂರ್ತಿ ಅವರಿಗೆ ಕ್ಲಿನಿಕ್ ನಲ್ಲಿ ಕೊಲೆ ಬೆದರಿಕೆ ಒಡ್ಡಲಾಗಿತ್ತು. ಅನಂತರ ಡಾ.ಕೃಷ್ಣಮೂರ್ತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಆರೋಪಿಗಳು ಮಹಿಳೆಯ ಮೂಲಕ ಬೆದರಿಸಿ ಡಾಕ್ಟರ್ ಕೈಯಿಂದ ಲಕ್ಷಗಟ್ಟಲೆ ಹಣ ಪಡೆಯಲು ಯೋಜನೆ ಹಾಕಿದ್ದರು ಎಂದು ತಿಳಿದು ಬಂದಿದೆ. ಮಂಗಳೂರು ಗಡಿ ಭಾಗದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಡಾ.ಕೃಷ್ಣಮೂರ್ತಿ ಕಳೆದ 30 ವರ್ಷಗಳಿಂದ ದಂತ ವೈದ್ಯರಾಗಿದ್ದಾರೆ. ಆದರೆ ಕಳೆದ ನವೆಂಬರ್‌ 8ರಂದು ಕ್ಲೀನಿಕ್ ಗೆ ಹೋದ ಡಾ.ಕೃಷ್ಣಮೂರ್ತಿ ಆ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಎಷ್ಟೇ ಹುಡುಕಾಟ ‌ನಡೆಸಿದರೂ ಅವರ ಪತ್ತೆಯಾಗಿರಲಿಲ್ಲ. 

ಕಾಸರಗೋಡಿನ ವೈದ್ಯ ನಿಗೂಢ ಸಾವು: ಮುಸ್ಲಿಂ ಯುವತಿ ವಿಚಾರದಲ್ಲಿ ತಂಡದ ಬೆದರಿಕೆ ಕಾರಣವಾಯ್ತಾ?

ಆದರೆ ನವೆಂಬರ್ 09 ರಂದು ಬದಿಯಡ್ಕದಿಂದ 180 ಕಿ.ಮೀ ದೂರದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಟ್ಟಿಯಂಗಡಿ‌ ಬಳಿಯ ರೈಲು ಹಳಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆದರೆ ನವೆಂಬರ್ 10ರಂದು ಕುಟುಂಬಿಕರು ಮೃತದೇಹದ ಗುರುತು ಪತ್ತೆ ಮಾಡಿದ್ದರು. ಮೇಲ್ನೋಟಕ್ಕೆ ಆತ್ಮಹತ್ಯೆ ಅಂತ ಕಂಡುಬಂದರೂ ಅವರ ಸಾವಿನ ಸುತ್ತ ಅನುಮಾನ ನೆಟ್ಟಿದೆ. ಅವರ ಮನೆಯವರು ಹೇಳುವ ಪ್ರಕಾರ ಜಾಗದ ವಿಚಾರದಲ್ಲಿ ಕೆಲ ತಗಾದೆ ಇತ್ತು ಎನ್ನಲಾಗಿದೆ. ಆರು ತಿಂಗಳಿನಿಂದ ಜಾಗದ ವಿಚಾರದಲ್ಲಿ ‌ಕೃಷ್ಣಮೂರ್ತಿ‌ ನಿರಂತರ ಕಿರುಕುಳ, ಬೆದರಿಕೆ ಅನುಭವಿಸಿದ್ದರು ಎನ್ನಲಾಗಿದೆ. ಅವರ ಜಾಗವನ್ನು ತಮಗೇ ಮಾರಾಟ ಮಾಡುವಂತೆ ಕೆಲವರು ಕಿರುಕುಳ ನೀಡುತ್ತಿದ್ದ ಬಗ್ಗೆ ದೂರಲಾಗಿದೆ. ಇದೇ ವಿಚಾರದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡರಾ ಅನ್ನೋ ಅನುಮಾನಗಳಿವೆ.

Mangaluru: ವೈದ್ಯಕೀಯ ವಿದ್ಯಾರ್ಥಿ ಸಾವು: 8 ವರ್ಷಗಳ ಬಳಿಕ ಸಿಬಿಐಗೆ ವಹಿಸಿದ ಸುಪ್ರೀಂಕೋರ್ಟ್!

ಮುಸ್ಲಿಂ ಯುವತಿ ಜೊತೆ ಅನುಚಿತ ವರ್ತನೆ ಆರೋಪ!: ಈ ನಡುವೆ ನವೆಂಬರ್ 8 ರಂದು ಬೆಳಿಗ್ಗೆ ಡಾ.ಕೃಷ್ಣಮೂರ್ತಿ ಬದಿಯಡ್ಕದ ಕ್ಲೀನಿಕ್ ಗೆ ಬಂದಿದ್ದರು. ಬೆ.11ರ ಸುಮಾರಿಗೆ ತಪಾಸಣೆಗೆಂದು ಮುಸ್ಲಿಂ ಯುವತಿಯೊಬ್ಬಳು ಕ್ಲೀನಿಕ್ ಗೆ ಬಂದಿದ್ದಾಳೆ. ಆದರೆ ಈ ವೇಳೆ ಆಕೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ತಂಡವೊಂದು ಅವರಿಗೆ ಹಲ್ಲೆಗೆ ಮುಂದಾಗಿ ಬೆದರಿಕೆ ಒಡ್ಡಿದೆ ಎನ್ನಲಾಗಿದೆ. ‌ಇದಾದ ‌ಬಳಿಕ ಅವರು ಬೈಕ್ ನಲ್ಲಿ ತೆರಳಿದ್ದು, ಮೊಬೈಲ್ ಕ್ಲಿನಿಕ್ ನಲ್ಲೇ ಇಟ್ಟಿದ್ದರು. ಬೈಕ್ ಬದಿಯಡ್ಕ ಪೇಟೆಯಲ್ಲಿ ಇಟ್ಟು ನಾಪತ್ತೆಯಾಗಿದ್ದರು. ಇದಾದ ಬಳಿಕ ಮನೆಯವರು ಬೆದರಿಕೆ ಹಾಕಿದವರ ವಿರುದ್ದ ಬದಿಯಡ್ಕ ಠಾಣೆಗೆ ‌ದೂರು ನೀಡಿದ್ದು, ಮುಸ್ಲಿಂ ಯುವತಿ ‌ಕಡೆಯವರೂ ಪ್ರತಿದೂರು ನೀಡಿದ್ದಾರೆ. ಈ ಮಧ್ಯೆ ನಿನ್ನೆ ಅವರ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ‌ಕೃಷ್ಣಮೂರ್ತಿ ಪುತ್ರಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ರೈಲು ಹಳಿಯಲ್ಲಿ ದೇಹ ಎರಡು ತುಂಡಾಗಿ ಬಿದ್ದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ