ಬೆಂಗಳೂರು: ಭಾವನ ಜತೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಗಂಡನನ್ನೇ ಕೊಂದ ಹೆಂಡ್ತಿ!

Published : Oct 27, 2024, 05:00 AM IST
ಬೆಂಗಳೂರು: ಭಾವನ ಜತೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಗಂಡನನ್ನೇ ಕೊಂದ ಹೆಂಡ್ತಿ!

ಸಾರಾಂಶ

ಕೆಲ ದಿನಗಳ ಹಿಂದೆ ಬೋಗನಹಳ್ಳಿ ಸಮೀಪ ನಾಗರತ್ನ ಪತಿ ತಿಪ್ಪೇಶ್‌ನನ್ನು ಆರೋಪಿಗಳು ಹತ್ಯೆಗೈದಿದ್ದರು. ಈ ಕೃತ್ಯ ಎಸಗಿದ ಬಳಿಕ ತನ್ನ ಪತಿಯನ್ನು ಅಪರಿಚಿತರು ಕೊಂದಿದ್ದಾರೆ ಎಂದು ಬೆಳ್ಳಂದೂರು ಠಾಣೆಗೆ ಮೃತನ ಪತ್ನಿ ನಾಗರತ್ನ ದೂರು ನೀಡಿದ್ದಳು. ಈ ಕೃತ್ಯ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಮೃತನ ಪತ್ನಿ ನಿಜ ಬಣ್ಣ ಬಯಲುಗೊಳಿಸಿದ್ದಾರೆ. 

ಬೆಂಗಳೂರು(ಅ.27): ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತನ್ನ ಪತಿಯನ್ನು 1 ಲಕ್ಷಕ್ಕೆ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಬಳಿಕ ಅಪರಿಚಿತರು ಕೊಂದಿದ್ದಾರೆ ಎಂದು ನಾಟಕವಾಡಿದ್ದ ಮೃತನ ಪತ್ನಿ ಹಾಗೂ ಆಕೆಯ ಭಾವ ಸೇರಿದಂತೆ ಐವರನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಬೋಗನಹಳ್ಳಿ ನಿವಾಸಿ ನಾಗರತ್ನ, ಆಕೆ ಭಾವ (ಸೋದರಿ ಗಂಡ) ರಾಮ್, ಆಂಧ್ರದ ಧರ್ಮಾವರಂ ಮೂಲದ ಶಶಿಕುಮಾರ್, ಸುರೇಶ್ ಹಾಗೂ ಚಿನ್ನ ಬಂಧಿತರಾಗಿದ್ದಾರೆ. ಕೆಲ ದಿನಗಳ ಹಿಂದೆ ಬೋಗನಹಳ್ಳಿ ಸಮೀಪ ನಾಗರತ್ನ ಪತಿ ತಿಪ್ಪೇಶ್‌ನನ್ನು ಆರೋಪಿಗಳು ಹತ್ಯೆಗೈದಿದ್ದರು. ಈ ಕೃತ್ಯ ಎಸಗಿದ ಬಳಿಕ ತನ್ನ ಪತಿಯನ್ನು ಅಪರಿಚಿತರು ಕೊಂದಿದ್ದಾರೆ ಎಂದು ಬೆಳ್ಳಂದೂರು ಠಾಣೆಗೆ ಮೃತನ ಪತ್ನಿ ನಾಗರತ್ನ ದೂರು ನೀಡಿದ್ದಳು. ಈ ಕೃತ್ಯ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಮೃತನ ಪತ್ನಿ ನಿಜ ಬಣ್ಣ ಬಯಲುಗೊಳಿಸಿದ್ದಾರೆ. 

ಅಕ್ಕನ ಗಂಡನೊಂದಿಗೆ ಅಕ್ರಮ ಸಂಬಂಧಕ್ಕೆ ಗಂಡನಿಗೆ ಗುಂಡಿ ತೋಡಿದ ಸುಪನಾತಿ ಹೆಂಡತಿ!

ಸೋದರಿ ಪತಿ ಜತೆ ಲವ್, ಸೆಕ್ಸ್: 

10 ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ತಿಪ್ಪೇಶ್ ಹಾಗೂ ನಾಗರತ್ನ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೂಲಿ ಅರಸಿಕೊಂಡು ನಗರಕ್ಕೆ ಬಂದಿದ್ದ ತಿಪ್ಪೇಶ್ ದಂಪತಿ, ಬೆಳ್ಳಂದೂರು ಸಮೀಪ ನಿರ್ಮಾಣ ಹಂತದ ಕಟ್ಟಡಗಳಲ್ಲಿ ದುಡಿದು ಜೀವನಸಾಗಿಸುತ್ತಿದ್ದರು. ಬೋಗನಹಳ್ಳಿ ಲೇಬರ್‌ಶೆಡ್‌ನಲ್ಲಿ ಅವರು ವಾಸವಾಗಿದ್ದರು. ಈ ನಡುವೆ ತನ್ನ ಭಾವ ರಾಮನ ಜತೆ ನಾಗರತ್ನಗೆ ಅಕ್ರಮ ಸಂಬಂಧ ಬೆಳೆಯಿತು. ಈ ಸ್ನೇಹದ ವಿಚಾರ ತಿಳಿದ ತಿಪ್ಪೇಶ್, ಮನೆಯಲ್ಲಿ ಪತ್ನಿ ಜತೆ ಜಗಳವಾಡಿದ್ದ. ಅಲ್ಲದೆ ಭಾವನ ನಂಟು ಕಡಿದುಕೊಳ್ಳುವಂತೆ ಆತ ತಾಕೀತು ಮಾಡಿದ್ದ. ಈ ಗಲಾಟೆ ಸಂಗತಿಯನ್ನು ಭಾವನಿಗೆ ಹೇಳಿದೆ ನಾಗರತ್ನ, ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿರುವ ಪತಿಯನ್ನು ಕೊಲ್ಲಲು ಸೂಚಿಸಿದ್ದಳು. ತರುವಾಯ ಆಂಧ್ರಪ್ರದೇಶದ ಶಶಿಕುಮಾರ್, ಸುರೇಶ್ ಹಾಗೂ ಚಿನ್ನನ್ನು ಸಂಪರ್ಕಿಸಿ 1 ಲಕ್ಷಕ್ಕೆ ನಾಗ ರತ್ನ ಸುಪಾರಿ ಕೊಟ್ಟಿದ್ದಳು. ಈ ಹಣದಾಸೆಗೆ ಆರೋಪಿಗಳು ಕೃತ್ಯ ಎಸಗಲು ಸಮ್ಮತಿಸಿದ್ದರು. ಚಿತ್ರದುರ್ಗದಲ್ಲಿ ರಾಮ್ ಕೂಡ ನಿರ್ಮಾಣ ಹಂತದಲ್ಲಿ ಕಾರ್ಮಿಕನಾಗಿದ್ದ ಪೊಲೀಸರು ಹೇಳಿದ್ದಾರೆ.

ಗರ್ಲ್‌ಫ್ರೆಂಡ್ ಮದ್ವೆಯಾಗಲು ಬದುಕಿರುವ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಗಂಡ!

ಎಟಿಎಂನಲ್ಲಿ ಹಣ ತರುವ ನೆಪದಲ್ಲಿ ಹತ್ಯೆ

ಪೂರ್ವಯೋಜಿತ ಸಂಚಿನಂತೆ ಅ.14ರಂದು ತಿಪ್ಪೇಶ್ ಹತ್ಯೆಗೆ ನಾಗರತ್ನ ಗ್ಯಾಂಗ್ ಮು ಹೂರ್ತ ನಿಶ್ಚಯಿಸಿದ್ದರು. ಅಂತೆಯೇ ಆ ದಿನ ಬೋಗನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ಸುಪಾರಿ ಹಂತಕರು ಕಾಯ್ದೆ ದ್ದರು. ಆಗ ಎಟಿಎಂನಲ್ಲಿ ಹಣ ತರುವೆ ನೆಪದಲ್ಲಿ ಮನೆಯಿಂದ ಪತಿ ತಿಪ್ಪೇಶ್‌ನನ್ನು ಕರೆತಂದ ನಾಗರತ್ನ, ಎಟಿಎಂಗೆ ಹೋಗಲು ತೋಪಿನ ದಾರಿಯಲ್ಲಿ ಸಾಗಿದ್ದಾಳೆ. ಆ ವೇಳೆ ನೀಲಗಿರಿ ತೋಪು ಪ್ರವೇಶಿಸುತ್ತಿದ್ದಂತೆ ತಿಪ್ಪೇಶ್ ಮೇಲೆ ಹಲ್ಲೆ ನಡೆಸಿ ಬಳಿಕ ಉಸಿರುಗಟ್ಟಿಸಿ ಕೊಂದು ಆರೋಪಿಗಳು ಪರಾರಿಯಾಗಿದ್ದರು. ಈ ಕೃತ್ಯ ಎಸಗಿದ ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ (112)ಗೆ ಕರೆ ಮಾಡಿದ್ದ ನಾಗರತ್ನ, ತಮ್ಮ ಪತಿಯನ್ನು ಯಾರೋ ಕೊಂದು ದುಷ್ಕರ್ಮಿಗಳು ಪರಾ ರಿಯಾಗಿದ್ದಾರೆ ಎಂದು ದೂರು ನೀಡಿದ್ದಳು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಕೃತ್ಯ ನಡೆದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ಗಳನ್ನು ಪರಿಶೀಲಿಸಿದಾಗ ನೀಲಗಿರಿ ತೋಪಿಗೆ ಎರಡು ಬೈಕ್‌ಗಳಲ್ಲಿ ಆರೋಪಿ ಗಳು ತೆರಳಿದ್ದ ದೃಶ್ಯಾವಳಿ ಸಿಕ್ಕಿತು. ಆ ಬೈಕ್ ಗಳ ನೋಂದಣಿ ಸಂಖ್ಯೆ ಆಧರಿಸಿ ಮಾಲಿ ಕರನ್ನು ಮೊಬೈಲ್ ಸಂಗ್ರಹಿಸಲಾಯಿತು. ಈ ಮೊಬೈಲ್ ಸಂಖ್ಯೆಗಳ ಕರೆಗಳ ವಿವರ ಸಂಗ್ರಹಿಸಿದಾಗ ನಾಗರತ್ನ ನಿರಂತರವಾಗಿ ಸಂಪರ್ಕದಲ್ಲಿದ್ದ ಸಂಗತಿ ಗೊತ್ತಾಯಿತು. ಈ ಮಾಹಿತಿ ಮೇರೆಗೆ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗೆ ಕೊನೆಗೆ ಸತ್ಯ ಬಾಯಿಟ್ಟಳು. ಈಕೆ ನೀಡಿದ ಸುಳಿವು ಆಧರಿಸಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು