ಬೆಂಗಳೂರು: ಲಾಡ್ಜ್‌ನಲ್ಲಿ ವಾಸ್ತವ್ಯ, ಹಾಸ್ಟೆಲ್‌ನಲ್ಲಿ ಲ್ಯಾಪ್‌ಟಾಪ್‌ ಕಳ್ಳತನ, ಐವರು ಅರೆಸ್ಟ್‌

Published : Oct 09, 2024, 07:02 AM IST
ಬೆಂಗಳೂರು: ಲಾಡ್ಜ್‌ನಲ್ಲಿ ವಾಸ್ತವ್ಯ, ಹಾಸ್ಟೆಲ್‌ನಲ್ಲಿ ಲ್ಯಾಪ್‌ಟಾಪ್‌ ಕಳ್ಳತನ, ಐವರು ಅರೆಸ್ಟ್‌

ಸಾರಾಂಶ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜನನಿ ಗ್ರಾಮದ ಪವನ್, ಚೇತನ್, ಆದರ್ಶ, ಜಯನಗರದ ಸಾಧು ನಾಯ್ಡು ಹಾಗೂ ಅಸ್ಸಾಂ ಮೂಲದ ಅಕ್ಟಲ್ ಬಂಧಿತರಾಗಿದ್ದು, ಆರೋಪಿಗಳಿಂದ 55 ಲ್ಯಾಪ್‌ಟಾಪ್, 28 ಮೊಬೈಲ್ ಹಾಗೂ 9 ಬೈಕ್‌ಗಳು ಸೇರಿದಂತೆ ಒಟ್ಟು 47 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 

ಬೆಂಗಳೂರು(ಅ.09):  ರಾಜಧಾನಿಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಹಾಗೂ ಹಾಸ್ಟೆಲ್‌ಗಳಲ್ಲಿ ಲ್ಯಾಪ್‌ಟಾಪ್ ಕಳವು ಮಾಡುತ್ತಿದ್ದ ಐವರನ್ನು ಪ್ರತ್ಯೇಕವಾಗಿ ಎಚ್‌ಎಸ್ ಆರ್ ಲೇಔಟ್, ಜಯನಗರ ಹಾಗೂ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಸೆರೆ ಹಿಡಿದು, ₹47 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಲಕ್ಷ ಮಾಡಿದ್ದಾರೆ. 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜನನಿ ಗ್ರಾಮದ ಪವನ್, ಚೇತನ್, ಆದರ್ಶ, ಜಯನಗರದ ಸಾಧು ನಾಯ್ಡು ಹಾಗೂ ಅಸ್ಸಾಂ ಮೂಲದ ಅಕ್ಟಲ್ ಬಂಧಿತರಾಗಿದ್ದು, ಆರೋಪಿಗಳಿಂದ 55 ಲ್ಯಾಪ್‌ಟಾಪ್, 28 ಮೊಬೈಲ್ ಹಾಗೂ 9 ಬೈಕ್‌ಗಳು ಸೇರಿದಂತೆ ಒಟ್ಟು 47 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ. 

ಬೆಂಗಳೂರು: ಪಾಲಿಶ್‌ಗೆ ನೀಡಿದ್ದ 1.27 ಕೇಜಿ ಚಿನ್ನ ದೋಚಿ, ಪ್ರೇಯಸಿ ಜತೆ ಲಕ್ಷುರಿ ಹೋಟೆಲಲ್ಲಿ ಮೋಜು!

ಇತ್ತೀಚೆಗೆ ನಗರದಲ್ಲಿ ರಾತ್ರಿ ವೇಳೆ ಲ್ಯಾಪ್‌ಟಾಪ್ ಕಳ್ಳತನ ಕೃತ್ಯಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್, ಜಯನಗರ ಹಾಗೂ ಎಚ್‌ಎಸ್‌ಆರ್‌ ಲೇಔಟ್ ಠಾಣೆಗಳ ಪೊಲೀಸರು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸೇರಿದಂತೆ ತಾಂತ್ರಿಕ ಮಾಹಿತಿ ಆಧರಿಸಿ ಐವರನ್ನು ಸೆರೆ ಹಿಡಿದಿದ್ದಾರೆ. 

ಲಾಡ್ಜ್‌ನಲ್ಲಿ ವಾಸ್ತವ್ಯ-ಹಾಸ್ಟೆಲ್‌ಗಳಲ್ಲಿ ಕಾರ್ಯಾಚರಣೆ: 

ಚನ್ನರಾಯಪಟ್ಟಣದ ಚೇತನ್, ಆದರ್ಶ್ ಹಾಗೂ ಪವನ್ ಬಾಲ್ಯ ಸ್ನೇಹಿತರಾಗಿದ್ದು, ಈ ಮೂವರ ಪೈಕಿ ಚೇತನ್ ಹಾಗೂ ಪವನ್ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದಾರೆ. ಚೇತನ್ ವೃತ್ತಿಪರ ಲ್ಯಾಪ್ಟಾಪ್ ಕಳ್ಳನಾಗಿದ್ದರೆ, ಪವನ್ ಬೈಕ್ ಕಳ್ಳತನಕ್ಕೆ ಕುಖ್ಯಾತಿ ಪಡೆದಿದ್ದಾನೆ. ಕೆಲ ದಿನಗಳಿಂದ ನಾಗರಭಾವಿ ಸಮೀಪ ಲಾಡ್ಜ್‌ನಲ್ಲಿ ತಂಗಿದ್ದ ಈ ಗ್ಯಾಂಗ್, ಮನೆಗಳು ಹಾಗೂ ಹಾಸ್ಟೆಲ್ ಸೇರಿದಂತೆ ಇತರೆಡೆ ರಾತ್ರಿ ವೇಳೆ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಕಳ್ಳತನ ಮಾಡಲು ಸಂಪಿಗೆಹಳ್ಳಿ ಸಮೀಪ ಕಳ್ಳತನ ಮಾಡಿದ್ದ ಬೈಕ್ ಬಳಸಿಕೊಂಡು ರಾತ್ರಿ ವೇಳೆ ಜನವಸತಿ, ಪಿಜಿಗಳು ಹಾಗೂ ಹಾಸ್ಟೆಲ್‌ಗಳ ಕಡೆಗೆ ಆರೋಪಿಗಳು ಅಡ್ಡಾಡುತ್ತಿದ್ದರು. ಈ ವೇಳೆ ಕಿಟಕಿ ತೆರೆದು ನಿದ್ರೆಯಲ್ಲಿದ್ದವರಿಂದ ಮೊಬೈಲ್ ಹಾಗೂ ಮನೆಗಳ ಬೀಗ ಮುರಿದು ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. 

ಬೆಂಗಳೂರು: ಪಾರಿವಾಳ ಹಿಡಿವ ಸೋಗಿನಲ್ಲಿ ಮನೆ ದೋಚುತ್ತಿದ್ದ ಖತರ್ನಾಕ್‌ ಖದೀಮ ಅರೆಸ್ಟ್‌

ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಲ್ಯಾಪ್ ಟಾಪ್ ಕಳ್ಳತನ ನಡೆದಿದ್ದವು. ಇನ್‌ಸ್ಪೆಕ್ಟರ್‌ಜಗದೀಶ್ ನೇತೃತ್ವದ ತಂಡ ಸಿಸಿಟಿವಿಯಲ್ಲಿ ಪತ್ತೆಯಾದ ಬೈಕ್ ನೋಂದಣಿ ಸಂಖ್ಯೆ ಆಧರಿಸಿ ನಾಗರಭಾವಿ ಸಮೀಪ ಲಾಡ್ಜ್‌ನಲ್ಲಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಬಂಧಿತರಿಂದ 28 ಮೊಬೈಲ್‌ಗಳು, 34 ಲ್ಯಾಪ್ಟಾಪ್‌ಗಳು ಹಾಗೂ 4 ಬೈಕ್‌ಗಳು ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. 

ಜಯನಗರ ಪೊಲೀಸರಿಗೆ ಸಾಧು ಸಿಕ್ಕಿಬಿದ್ದಿದ್ದು, ಆತನಿಂದ 12 ಲಕ್ಷ ಮೌಲ್ಯದ 17 ಲ್ಯಾಪ್‌ಟಾಪ್‌ಗಳು ಜಪ್ತಿ ಮಾಡಲಾಗಿದೆ. ಮತ್ತೊಬ್ಬ ಖದೀಮ ಅಕ್ಕಲ್, ಎಚ್‌ಎಸ್‌ಆರ್‌ಲೇಔಟ್ ಪೊಲೀಸರ ಗಾಳಕ್ಕೆ ಬಿದ್ದಿದ್ದಾನೆ. ಈತನಿಂದ 5 ಬೈಕ್‌ಗಳು ಹಾಗೂ 4 ಲ್ಯಾಪ್ಟಾಪ್‌ಗಳು ಸೇರಿ ₹12 ಲಕ್ಷ ಬೆಲೆಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಕ್ಸಲ್ ಅಸ್ಸಾಂ ಮೂಲದವನಾಗಿದ್ದು, ಗಾರ್ವೆಪಾಳ್ಯದಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ