ಧಾರವಾಡದಲ್ಲಿ ಗಾಂಜಾ ಮಾರಾಟ: ವಜಾಗೊಂಡ ಪೊಲೀಸ್‌ ಸೇರಿ ಐವರು ಅಂದರ್‌

Kannadaprabha News   | Asianet News
Published : Sep 16, 2020, 11:23 AM IST
ಧಾರವಾಡದಲ್ಲಿ ಗಾಂಜಾ ಮಾರಾಟ: ವಜಾಗೊಂಡ ಪೊಲೀಸ್‌ ಸೇರಿ ಐವರು ಅಂದರ್‌

ಸಾರಾಂಶ

1.75 ಕೆಜಿ ಗಾಂಜಾ, ನಾಲ್ಕು ಮೊಬೈಲ್‌ ಹಾಗೂ 2 ಬೈಕ್‌ ವಶ| ಸಮೀವುಲ್ಲಾ ಹುಬ್ಬಳ್ಳಿ, ಜಡಸನ್‌ ಮೀರಜಕರ, ಗರಗ ಗ್ರಾಮದ ಮಂಜುನಾಥ ಜತ್ಲಿ, ಸಂಗಮೇಶ ಅಂಗಡಿ ಬಂಧಿತ ಆರೋಪಿಗಳು| 

ಧಾರವಾಡ(ಸೆ.16): ಈ ಹಿಂದೊಮ್ಮೆ ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ ಸಿಕ್ಕು ಬಿದ್ದು ಸೇವೆಯಿಂದ ವಜಾ ಆಗಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ ಮತ್ತೆ ಅದೇ ವ್ಯವಹಾರದಲ್ಲಿ ತೊಡಗಿದ್ದಾಗ ಉಪ ನಗರ ಪೊಲೀಸ್‌ರ ಕೈಗೆ ಸಿಕ್ಕು ಬಿದ್ದಿದ್ದಾನೆ. ಇದಲ್ಲದೇ ಇನ್ನೂ ನಾಲ್ವರು ಯುವಕರು ಸಹ ಗಾಂಜಾ ವ್ಯವಹಾರ ಮಾಡುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್‌ ಕಾನಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕು ಕನದಾಳ ಗ್ರಾಮದ ಸದ್ಯ ಮುರುಘಾಮಠದ ನಿವಾಸಿ ಸಂಜೀವ್‌ ಪಾಟೀಲ ಗಾಂಜಾ ಮಾರಾಟ ಮಾಡುತ್ತಿದ್ದಾಗ ಮಾಹಿತಿ ಮೇರೆಗೆ ಬಂಧಿಸಿ ಆತನಿಂದ 283 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್‌ ಜಪ್ತಿ ಮಾಡಿದ್ದಾರೆ. ನಂತರ ಆತನಿಗೆ ಕೊರೋನಾ ಪರೀಕ್ಷೆ ಮಾಡಿಸಲಾಗಿದ್ದು, ಪಾಸಿಟಿವ್‌ ದೃಢಪಟ್ಟಿದೆ.

ಹುಬ್ಬಳ್ಳಿ: ಪೊಲೀಸರ ಭರ್ಜರಿ ಕಾರ್ಯಾಚರಣೆ, ಲಕ್ಷಾಂತರ ರೂ. ಮೌಲ್ಯದ ಗಾಂಜಾ ಜಪ್ತಿ

ಇದಲ್ಲದೇ, ಗಾಂಜಾ ಮಾರುತ್ತಿದ್ದ ಯುವಕರ ಗುಂಪೊಂದನ್ನು ಬಂಧಿಸಿರುವ ಉಪನಗರ ಠಾಣೆ ಪೊಲೀಸರು 1.75 ಕೆಜಿ ಗಾಂಜಾ, ನಾಲ್ಕು ಮೊಬೈಲ್‌ ಹಾಗೂ 2 ಬೈಕ್‌ ವಶಕ್ಕೆ ಪಡೆದಿದ್ದಾರೆ. ನಾರಾಯಣಪುರ ನಿವಾಸಿ ಸಮೀವುಲ್ಲಾ ಹುಬ್ಬಳ್ಳಿ, ಜಡಸನ್‌ ಮೀರಜಕರ, ಗರಗ ಗ್ರಾಮದ ಮಂಜುನಾಥ ಜತ್ಲಿ, ದಾನೇಶ್ವರ ನಗರದ ಸಂಗಮೇಶ ಅಂಗಡಿ ಬಂಧಿತ ಆರೋಪಿಗಳು. ಈ ಎಲ್ಲರ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಎಂದು ಠಾಣೆ ಇನಸ್ಪೆಕ್ಟರ್‌ ಎಲಿಗಾರ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!