ಮತಾಂತರ ನಿಷೇಧ ಕಾನೂನು ಜಾರಿಗೆ ಬಂದಿದ್ರೂ, ಮರ್ಮಾಂಗದ ತುದಿ ಕತ್ತರಿಸಿ ಬಲವಂತದ ಮತಾಂತರ!

Published : Sep 25, 2022, 11:42 AM ISTUpdated : Sep 25, 2022, 12:20 PM IST
ಮತಾಂತರ ನಿಷೇಧ ಕಾನೂನು ಜಾರಿಗೆ ಬಂದಿದ್ರೂ, ಮರ್ಮಾಂಗದ ತುದಿ ಕತ್ತರಿಸಿ ಬಲವಂತದ ಮತಾಂತರ!

ಸಾರಾಂಶ

ಮತಾಂತರ ಕಠಿಣ ಕಾನೂನು ಜಾರಿಗೆ ಮಧ್ಯೆ ಬಲವಂತದ ಮತಾಂತರ. ಹುಬ್ಬಳ್ಳಿಯಲ್ಲಿ ೧೧ ಜನರ ವಿರುದ್ಧ ಎಫ್.ಐ.ಆರ್ ದಾಖಲು. ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದವರು ಈಗ ಕಂಬಿ‌ ಹಿಂದೆ.

ಹುಬ್ಬಳ್ಳಿ (ಸೆ.25) : ರಾಜ್ಯ ಸರ್ಕಾರ ಈಗಾಗಲೇ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದೆ. ಆದ್ರೂ ಕೆಲ‌ ಮತಾಂಧರು ತಮ್ಮ ಕೆಲಸ ಬಿಟ್ಟಿಲ್ಲ. ಇದಕ್ಕೆ ಇಂಬು ಕೊಡುವಂಥ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ದಲಿತ ಯುವಕನೋರ್ವನ ಮರ್ಮಾಂಗದ ತುದಿ ಕತ್ತರಿಸಿ(ಖತ್ನಾ) ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ 11 ಮಂದಿ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ಹುಬ್ಬಳ್ಳಿ(Hubballiಯ ನವನಗರ ಪೊಲೀಸ್ ಠಾಣೆ(Navanagar Police Station)ಯಲ್ಲಿ‌ ದಾಖಲಾಗಿರುವ ಈ ಎಫ್‌ಐಆರ್(FIR) ಒಮ್ಮೆ ಓದಿದ್ರೆ ರಾಜ್ಯದಲ್ಲಿ ಬಲವಂತದ ಮತಾಂತರ ಹೇಗೆಲ್ಲ ನಡೆಯುತ್ತಿದೆ ಅನ್ನೊದು ಗೊತ್ತಾಗುತ್ತೆ. 

ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಂಡ್ಯದ ಯಾದವನಹಳ್ಳಿ(Yadavanahalli) ಗ್ರಾಮದ ಶ್ರೀಧರ ಗಂಗಾಧರ(Shridhar Gangadhar)ನಿಗೆ ಹಣದ ಆಮಿಷ ಒಡ್ಡಿ ಬಳಿಕ ಆತನ ಮರ್ಮಾಂಗದ ತುದಿ ಕತ್ತರಿಸಿ(ಖತ್ನಾ) ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ರಂತೆ. ಆರಂಭದಲ್ಲಿ ಶ್ರೀದರ್ ಗೆ ಪರಿಚಯವಾದ ಮಂಡ್ಯದ ಅತ್ತಾವರ ರೆಹಮಾನ್, ಆರ್ಥಿಕ ನೆರವು ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆದೊಯ್ದು, ಬೆಂಗಳೂರಿನ ಅಜೀಸಾಬ್ ಜೊತೆ ಸೇರಿಕೊಂಡು ಮತಾಂತರ ಪ್ಲಾನ್ ಮಾಡ್ತಾರೆ. ಇವರಿಗೆ ಹುಬ್ಬಳ್ಳಿಯ ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ಸೇರಿ ೧೦ ಕ್ಕೂ ಹೆಚ್ಚು ಜನ ಸೇರಿಕೊಂಡು ದಲಿತ ಜಾತಿಗೆ ಸೇರಿದ ಶ್ರೀಧರನ್ನ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ. ಇದನ್ನು ಸ್ವತಃ ಶ್ರೀಧರ ದೂರಿನಲ್ಲಿ ದಾಖಲಿಸಿದ್ದಾರೆ.

ಮತಾಂತರಕ್ಕೆ ಸರ್ಕಾರದ ಅಂಕುಶ: ಮತಾಂತರ ಕಾಯ್ದೆ ಹೇಳೋದೇನು? ಹೊಸ ನಿಯಮಗಳೇನು?

ಶ್ರೀಧರ ದಾಖಲಿಸಿದ ಎಫ್ಐಆರ್‌ನಲ್ಲಿ‌ ಏನೇನಿದೆ?

 ಅರ್ಥಿಕ ಸಂಕಷ್ಟದಲ್ಲಿದ್ದ ಶ್ರೀಧರಗೆ ನೆರವು ನೀಡುವ ನೆಪದಲ್ಲಿ ಕಳೆದ ಮೇ ತಿಂಗಳಲ್ಲಿ ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಅಲ್ಲಿನ ಬನಶಂಕರಿ(Banashankari)ಯ ಮಸೀದಿ(mosque)ಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರು. ನಂತರ ಅವರಿಗೆ ಮುಸ್ಲಿಂ(Muslim)ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ಮರ್ಮಾಂಗದ ತುದಿ ಕತ್ತರಿಸಿದ್ದಾರೆ. ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಲ್ಲದೆ, ಮತಾಂತರದ ಬಗ್ಗೆ ಬಾಂಡ್ ಪೇಪರ್(Bond paper)ನಲ್ಲಿ ಸಹಿ‌ ಪಡೆದಿದ್ದಾರೆ. ಅಲ್ಲಿಂದ ತಿರುಪತಿಗೆ ಕರೆದೊಯ್ದು, ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿದ್ದಾರೆ.

ಪ್ರತಿವರ್ಷ ಮೂವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಬೇಕೆಂದು ಆರೋಪಿಗಳು ಶ್ರೀಧರ ಅವರಿಗೆ ಬೆದರಿಸಿದ್ದಾರೆ. ಅವರ ಕೈಯ್ಯಲ್ಲಿ ಪಿಸ್ತೂಲ್ ಹಿಡಿಸಿ ಫೋಟೊ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಭಯೋತ್ಪಾದಕನೆಂದು ಬಿಂಬಿಸುವುದಾಗಿ ಹೆದರಿಸಿದ್ದಾರೆ. ನಂತರ ಅವರ ಬ್ಯಾಂಕ್ ಖಾತೆಗೆ 35 ಸಾವಿರ ರೂ. ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ.

ದಲಿತ ಯುವಕನಿಗೆ ಬಲವಂತದಿಂದ ಮುಂಜಿ ಮಾಡಿಸಿ ಇಸ್ಲಾಂಗೆ ಮತಾಂತರ: ಹುಬ್ಬಳ್ಳಿಯಲ್ಲಿ ಕೇಸು ದಾಖಲು

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ..? 

 ಶ್ರೀಧರ ಅವರು ಸಾಮಾಜಿಕ ಜಾಲತಾಣ(Social Media)ದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸೆಪ್ಟೆಂಬರ್. 21ರಂದು ಹುಬ್ಬಳ್ಳಿಯ ಬೈರಿದೇವರಕೊಪ್ಪಕ್ಕೆ ಬಂದಾಗ, ಅಪರಿಚಿತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಿಮ್ಸ್(KIMS)ನಲ್ಲಿ ಚಿಕಿತ್ಸೆ ಪಡೆದ ಅವರು, ಈ ಹಿಂದಿನ ಘಟನೆಯಿಂದ ಬೇಸತ್ತು ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪ್ರಕರಣ ಬೆಳಕಿಗೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!
ದಂಪತಿ, ಪಾಲಿಕೆ ಅಧಿಕಾರಿಗಳ ಕಿರುಕುಳಕ್ಕೆ ಟೆಕ್ಕಿ ದುರಂತ ಸಾವು, ಡೆಟ್‌ನೋಟ್‌ನಲ್ಲಿ ಶಾಕಿಂಗ್ ಮಾಹಿತಿ!