
ಬೆಂಗಳೂರು(ಅ.28): ಕೊಡಿಗೇಹಳ್ಳಿ -ಹೂಡಿ ರೈಲ್ವೆ ನಿಲ್ದಾಣದ ಸಮೀಪ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ವಿದೇಶಿ ಪ್ರಜೆಗಳು ಕಾಡುಗೋಡಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಜಾರ ಲೇಔಟ್ನ ಚಿಕ್ವಾಡ್ ವಿನ್ಸೆಂಟ್ ಒಗಿಬೊ ಹಾಗೂ ಟಿ.ಸಿ.ಪಾಳ್ಯದ ಎಮಿಕಾ ಚಿನೆಡು ಮೈಕೆಲ್ ಬಂಧಿತರು. ಆರೋಪಿಗಳಿಂದ 300 ಗ್ರಾಂ ಗಾಂಜಾ ಹಾಗೂ ಎಂಡಿಎಂಎ, ನಾಲ್ಕು ಮೊಬೈಲ್ಗಳು, ಬೈಕ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಾಡುಗೋಡಿ ಸಮೀಪದ ಕೊಡಿಗೇಹಳ್ಳಿ-ಹೂಡಿ ರೈಲ್ವೆ ನಿಲ್ದಾಣದ ಬಳಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೋನಾ ಎಫೆಕ್ಟ್: ಕೆಲಸವಿಲ್ಲದೆ ಡ್ರಗ್ಸ್ ಪೆಡ್ಲರ್ ಆದ ಹೋಟೆಲ್ ನೌಕರ
ಆರೋಪಿಗಳು ಮೂಲತಃ ನೈಜೀರಿಯಾ ದೇಶದವರಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ವಿನ್ಸೆಂಟ್ ಬಂಧಿತನಾಗಿ ಜೈಲು ಸೇರಿದ್ದ. ಬಳಿಕ ಜಾಮೀನು ಪಡೆದು ಹೊರ ಬಂದು ಮತ್ತೆ ತನ್ನ ಚಾಳಿ ಮುಂದುವರೆಸಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ