
ಕನಕಪುರ(ಜು.23): ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ರಾಮನಗರ ಜಿಲ್ಲೆಯ ಕನಕಪುರದ ಮಳಗಾಳು ಬಡಾವಣೆಯಲ್ಲಿ ನಡೆದಿದೆ. ಗಲಾಟೆಯಲ್ಲಿ ಓರ್ವ ಯುವಕನ ಮುಂಗೈ ಕಟ್ ಆಗಿದ್ದು, ಕೆಲವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಜಿಪಂ ಮಾಜಿ ಅಧ್ಯಕ್ಷ ವೈರಮುಡಿ ಪುತ್ರ ಅನೀಶ್ ಎಡಗೈ ತುಂಡಾಗಿದೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಗಾಯಗೊಂಡ ಅನೀಶ್ ಹಾಗೂ ಇತರರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಮೀನು ವಿಚಾರ.. ಎರಡು ಕುಟುಂಬಗಳ ಮಧ್ಯೆ ಪೊಲೀಸರ ಎದುರೇ ಸಿನಿಮೀಯ ಶೈಲಿಯಲ್ಲಿ ಮಾರಾಮಾರಿ!
ಯುವಕರ ಗುಂಪೊಂದು ಅನೀಶ್ ಮನೆ ಬಳಿ ತೆರಳಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಏಳು ಮಂದಿಗೆ ಗಾಯಗಳಾಗಿವೆ. ಹಳೆ ವೈಶಮ್ಯಕ್ಕೆ ಆಗಾಗ್ಗೆ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹರ್ಷ, ಕರುಣೇಶ್ ಸೇರಿದಂತೆ 6 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಕನಕಪುರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ