
ಬೆಂಗಳೂರು(ಆ.17): ಬೀಗ ಹಾಕಿದ ಮನೆಗಳು ಹಾಗೂ ಕಚೇರಿಗಳ ಬೀಗ ಮುರಿದು ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಳೇ ಬೈಯಪ್ಪನಹಳ್ಳಿಯ ಅರುಣ್ (23), ಅಜಯ್ (24), ಪ್ರತಾಪ್ (25) ಹಾಗೂ ಸಾಯಿ ಅಲಿಯಾಸ್ ಅಪ್ಪು(25) ಬಂಧಿತರು. ಆರೋಪಿಗಳಿಂದ ₹4 ಲಕ್ಷ ಮೌಲ್ಯದ 24 ಗ್ರಾಂ ಚಿನ್ನಾಭರಣಗಳು, ದ್ವಿಚಕ್ರ ವಾಹನ ಹಾಗೂ ವಿವಿಧ ಕಂಪನಿಗಳ 11 ಲ್ಯಾಪ್ಟಾಪ್ ಜಪ್ತಿ ಮಾಡಲಾಗಿದೆ.
ನಗರದಲ್ಲಿ ಕಳ್ಳತನ, ಕಾಡಿನಲ್ಲಿ ವಾಸ: ಐನಾತಿ ಕಳ್ಳನ ಬಂಧನ
ಇತ್ತೀಚೆಗೆ ಕಾಡುಗೋಡಿಯ ಕಂಪನಿಯೊಂದರ ಕಚೇರಿ ಬೀಗ ಮುರಿದು 20 ಲ್ಯಾಪ್ಟಾಪ್ಗಳು, ವಾಷ್ ರೂಮ್ ಟ್ಯಾಪ್ ಗಳು ಸೇರಿದಂತೆ ಇತರೆ ವಸ್ತುಗಳನ್ನು ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ