ರಾಮನಗರ: ಚುನಾವಣಾ ಅಧಿಕಾರಿಗಳನ್ನು ಅಡ್ಡಗಟ್ಟಿ ದರೋಡೆ, ನಾಲ್ವರ ಬಂಧನ

Published : Oct 01, 2023, 07:32 AM IST
ರಾಮನಗರ: ಚುನಾವಣಾ ಅಧಿಕಾರಿಗಳನ್ನು ಅಡ್ಡಗಟ್ಟಿ ದರೋಡೆ, ನಾಲ್ವರ ಬಂಧನ

ಸಾರಾಂಶ

ಬಂಧಿತರಿಂದ ಒಂದು ಲ್ಯಾಪ್ ಟಾಪ್, ಎರಡು ಮೊಬೈಲ್, ಒಂದು ಮತ ಪತ್ರದ ಪುಸ್ತಕವನ್ನು ವಶಪಡಿಸಿಕೊಂಡು ಎರಡು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. 

ಮಾಗಡಿ(ಅ.01):  ತಾಲೂಕಿನ ಹುಳ್ಳೆನಹಳ್ಳಿ ಡೇರಿ ಚುನಾವಣೆಗೆ ತೆರಳುತ್ತಿದ್ದ ಚುನಾವಣಾ ಅಧಿಕಾರಿಗಳನ್ನು ಅಡ್ಡಗಟ್ಟಿ ಚುನಾವಣೆಗೆ ಸಂಬಂಧಿಸಿದಂತೆ ವಸ್ತುಗಳನ್ನು ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ. 

ತಾಲೂಕಿನ ಹೊಸಪಾಳ್ಯ ಮುಖ್ಯ ರಸ್ತೆಯಲ್ಲಿ ದಾಸೇಗೌಡ (28), ಹೇಮಂತ್ (26), ಶ್ರೀನಿವಾಸ್(28), ಮನು(25) ಇವರನ್ನು ಕುಣಿಗಲ್‌ ಮತ್ತು ಸೋಲೂರಿನಲ್ಲಿ ಬಂಧಿಸಿ, ಒಂದು ಲ್ಯಾಪ್ ಟಾಪ್, ಎರಡು ಮೊಬೈಲ್, ಒಂದು ಮತ ಪತ್ರದ ಪುಸ್ತಕವನ್ನು ವಶಪಡಿಸಿಕೊಂಡು ಎರಡು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. 

ರಾಮನಗರ ಚುನಾವಣಾ ಸಿಬ್ಬಂದಿಯ ಕಾರು ಅಡ್ಡಗಟ್ಟಿ ವೋಟಿಂಗ್‌ ಮಿಷನ್‌ ಕದ್ದೊಯ್ದ ದುಷ್ಕರ್ಮಿಗಳು

ಆರೋಪಿಗಳನ್ನು ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಕುದೂರು ಕುಮಾರ್, ಮಾಗಡಿ ಗಿರಿರಾಜ್, ಅಪರಾಧ ವಿಭಾಗದ ಬೀರಪ್ಪ, ಮುನೀಂದ್ರ, ಸೂರ್ಯ ಕುಮಾರ್, ಗುರುಮೂರ್ತಿ ತಂಡ ಬಂಧಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?