ಧಾರವಾಡ: ಹನಿಟ್ರ್ಯಾಪ್‌ಗೆ ಪತ್ನಿಯನ್ನೇ ಬಳಸುತ್ತಿದ್ದ ಭೂಪ!

Published : Oct 13, 2024, 08:52 AM IST
ಧಾರವಾಡ: ಹನಿಟ್ರ್ಯಾಪ್‌ಗೆ ಪತ್ನಿಯನ್ನೇ ಬಳಸುತ್ತಿದ್ದ ಭೂಪ!

ಸಾರಾಂಶ

ಆಕಾಶ ಮತ್ತು ರೇಣುಕಾ ಉಪ್ಪಾರ ದಂಪತಿ ಸೇರಿದಂತೆ ಮಲ್ಲಿಕ ಜಾನ್ ನದಾಫ್ ಮತ್ತು ಗಜಲಾಬಾನು ನಗರಿ ಎಂಬುವರನ್ನು ಬಂಧಿಸಲಾಗಿದೆ. ಆಕಾಶ ತನ್ನ ಪತ್ನಿಯನ್ನೇ ಹನಿಟ್ರ್ಯಾಪ್‌ಗೆ ಬಳಸಿರುವುದು ಆಘಾತಕಾರಿಯಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದ ಡಿಸಿಪಿ ಮಹಾನಿಂಗ ನಂದಗಾವಿ

ಧಾರವಾಡ(ಅ.13):  ಪತ್ನಿಯನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡು ಹಣ ಪೀಕುತ್ತಿದ್ದ ಅಪರೂಪದ ಪ್ರಕರಣವೊಂದು ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ದಂಪತಿ ಸೇರಿದಂತೆ ನಾಲ್ವರನ್ನು ವಿದ್ಯಾಗಿರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಪಿ ಮಹಾನಿಂಗ ನಂದಗಾವಿ, ಆಕಾಶ ಮತ್ತು ರೇಣುಕಾ ಉಪ್ಪಾರ ದಂಪತಿ ಸೇರಿದಂತೆ ಮಲ್ಲಿಕ ಜಾನ್ ನದಾಫ್ ಮತ್ತು ಗಜಲಾಬಾನು ನಗರಿ ಎಂಬುವರನ್ನು ಬಂಧಿಸಲಾಗಿದೆ. ಆಕಾಶ ತನ್ನ ಪತ್ನಿಯನ್ನೇ ಹನಿಟ್ರ್ಯಾಪ್‌ಗೆ ಬಳಸಿರುವುದು ಆಘಾತಕಾರಿಯಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದರು. 

ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ: ಸಂತ್ರಸ್ತೆ ಹೇಳಿಕೆ!

ದೂರವಾಣಿ ಮೂಲಕ ಅನ್ಯ ಜಿಲ್ಲೆಯ ವ್ಯಕ್ತಿಗಳನ್ನು ಸಂಪರ್ಕಿಸಿ, ಮೊದಲಿಗೆ ಸ್ನೇಹ ಬೆಳೆಸಿದ ಮಹಿಳೆಯರು, ನಂತರ ಒಂದಡೆ ಭೇಟಿ ಮಾಡಿದ್ದರು. ಬಳಿಕ ಆ ವ್ಯಕ್ತಿ ಮಹಿಳೆಯರೊಂದಿಗೆ ಇರುವ ವಿಡಿಯೋ ಚಿತ್ರೀಕರಣ ಸಹ ಮಾಡಿಕೊಂಡಿದ್ದಾಗಿ ತಿಳಿಸಿದರು. 

ನಂತರ ಮಹಿಳೆಯರು ಆ ವ್ಯಕ್ತಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟು, ಲಕ್ಷಾಂತರ ರೂಪಾಯಿ ಪೀಕಿದ ಬಗ್ಗೆ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಕಂಡಿ ದ್ದಾಗಿ ಹೇಳಿದರು. 

ಬಂಧಿತರಿಂದ ಚಿನ್ನ-ಬೆಳ್ಳಿ ಆಭರಣ, ನಗದು, ಕಾರು ಸೇರಿ 14.73 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳ ಜನ ಮೋಸಕ್ಕೆ ಒಳಗಾಗಿದ್ದಾರೆ. ಇವರ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ