ತುಮಕೂರು: ಒಂದೇ ಗ್ರಾಮದ ನಾಲ್ವರು ಮಕ್ಕಳು ನಿಗೂಢವಾಗಿ ನಾಪತ್ತೆ!

Published : May 22, 2023, 10:08 AM ISTUpdated : May 22, 2023, 02:40 PM IST
ತುಮಕೂರು: ಒಂದೇ ಗ್ರಾಮದ ನಾಲ್ವರು ಮಕ್ಕಳು ನಿಗೂಢವಾಗಿ ನಾಪತ್ತೆ!

ಸಾರಾಂಶ

ಮನೆಯಿಂದ ಹೊರಹೋದ ಮಕ್ಕಳು ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.

ತುಮಕೂರು (ಮೇ.22) : ಮನೆಯಿಂದ ಹೊರಹೋದ ಮಕ್ಕಳು ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.

ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು. ಎಲ್ಲರೂ 15 ವರ್ಷದ ವಯಸ್ಸಿನವರು. ಶನಿವಾರ ಮಧ್ಯಾಹ್ನದ ವೇಳೆ ನಾಲ್ವರು ಮನೆಯಿಂದ ಹೊರಗಡೆ ಹೋಗಿದ್ದಾರೆ. ಸಂಜೆಯಾದರೂ ಮನೆಗೆ ವಾಪಸ್ ಆಗಿಲ್ಲ. ಪೋಷಕರು ಆತಂಕಗೊಂಡು ಎಲ್ಲ ಕಡೆಯೂ ಹುಡುಕಾಡಿದ್ದಾರೆ ಆದರೂ ಮಕ್ಕಳು ಪತ್ತೆಯಾಗದೆ ನಿಗೂಢವಾಗಿ ಕಣ್ಮರೆಯಾಗಿರುವುದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.

ಮಕ್ಕಳನ್ನು ಸಾಕಷ್ಟು ಕಡೆ ಹುಡುಕಾಡಿದ್ದಾರೆ, ಪತ್ತೆಯಾಗದ ಹಿನ್ನೆಲೆ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು. ನೀಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

ಮಚ್ಚಿ​ನಿಂದ ಕೊಚ್ಚಿ ವ್ಯಕ್ತಿಯ ಕೊಲೆ

ತುಮ​ಕೂ​ರು: ಮಚ್ಚಿನಿಂದ ಕೊಚ್ಚಿ ವ್ಯಕ್ತಿ​ಯೊ​ಬ್ಬ​ನನ್ನು ದುಷ್ಕ​ರ್ಮಿ​ಗಳು ಕೊಲೆ ಮಾಡಿ​ರುವ ಘಟನೆ ತುಮ​ಕೂರು ಹೊರ​ವ​ಲ​ಯದ ಯಲ್ಲಾ​ಪು​ರ​ದಲ್ಲಿ ನಡೆ​ದಿದೆ.

ಚಿಕ್ಕಮಗಳೂರು ಮೂಲದ ಜಾಕೀರ್‌ ಇಸ್ಮಾಯಿಲ್ (36) ಕೊಲೆಯಾದ ವ್ಯಕ್ತಿ. ತುಮಕೂರು ಹೊರಹೊಲಯದಲ್ಲಿರುವ ಯಲ್ಲಾಪುರದ ಅಂಗಡಿಯಲ್ಲಿ ಘಟನೆ ಸಂಭವಿಸಿದ್ದು, ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದ ಜಾಕೀರ್‌ ನೂತನ ಟೈಲ್ಸ್‌ನ ಅಂಗಡಿಯನ್ನು 2 ತಿಂಗಳ ಹಿಂದೆ ಯಲ್ಲಾಪುರದಲ್ಲಿ ತೆರೆದಿದ್ದರು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರಬ​ಹುದು ಎನ್ನ​ಲಾ​ಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆ​ಸಿದ್ದು ಜಾಕೀರ್‌ ಸಹಾಯಕ ಖಾದರ್‌ನನ್ನು ಪೊಲೀ​ಸರು ವಶಕ್ಕೆ ಪಡೆ​ದಿ​ದ್ದಾರೆ. ಶವ​ವನ್ನು ಜಿಲ್ಲಾ​ಸ್ಪ​ತ್ರೆಯ ಶವಾ​ಗಾ​ರಕ್ಕೆ ರವಾ​ನಿ​ಸ​ಲಾ​ಗಿ​ದೆ.

.ಕುರಿಗಳ ಮೇಲೆ ನಾಯಿಗಳ ದಾಳಿ: 10 ಕುರಿ ಸಾವು

ಶಿರಾ: ಕುರಿ ರೊಪ್ಪದ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ 10 ಕುರಿಗಳು ಸಾವನ್ನಪ್ಪಿ, 8 ಕುರಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ತಾಲೂಕಿನ ಗೌಡಗೆರೆ ಹೋಬಳಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಬ್ರಹ್ಮಸಂದ್ರ ಗ್ರಾಮದ ಚಿಕ್ಕ ತಿಮ್ಮಣ್ಣ ಎಂಬುವವರಿಗೆ ಸೇರಿದ ಕುರಿ ರೊಪ್ಪದ ಮೇಲೆ ರಾತ್ರಿ ಮಳೆ ಬರುತ್ತಿದ್ದ ಕಾರಣ ನಾಯಿಗಳು ಕುರಿಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಕುರಿಗಳ ಕಿರಿಚಾಟದ ಶಬ್ದ ಕೇಳಿಸಿಲ್ಲ. ಬೆಳಗ್ಗೆ ಎದ್ದು ನೋಡಿದಾಗ ಘಟನೆ ನಡೆದಿರುವ ಬಗ್ಗೆ ತಿಳಿದಿದೆ. ಕುರಿಗಳಿಂದನೆ ಜೀವನ ಕಟ್ಟಿಕೊಂಡಿರುವ ಚಿಕ್ಕ ತಿಮ್ಮಣ್ಣ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?