ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Published : Mar 31, 2023, 09:08 AM ISTUpdated : Mar 31, 2023, 10:16 AM IST
ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಸಾರಾಂಶ

ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿ ಇರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು. 

ಮಂಗಳೂರು(ಮಾ.31): ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ದೇವೇಂದ್ರ (48),ನಿರ್ಮಲಾ(48), ಚೈತ್ರಾ(09),ಚೈತನ್ಯ (09)ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಬ್ಬರು ಅವಳಿ ಹೆಣ್ಣುಮಕ್ಕಳಾಗಿದ್ದಾರೆ. 

ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿ ಇರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮಂಡ್ಯ: ಕೌಟುಂಬಿಕ ಕಲಹಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣು

ಮೈಸೂರಿನ ವಿಜಯನಗರ ಮೂಲದ ಕುಟುಂಬ ಅಂತ ತಿಳಿದು ಬಂದಿದೆ. ಸಾಲಗಾರರ ಒತ್ತಡದಿಂದ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಉಲ್ಲೇಖಿಸಲಾಗಿದೆ. 

ಮಾ. 27ರಂದು ಒಂದು ದಿನಕ್ಕಾಗಿ ಲಾಡ್ಜ್‌ನಲ್ಲಿ ರೂಂ ಬುಕ್ ಮಾಡಿದ್ದು ಬಳಿಕ ಎರಡು ದಿ‌ನಕ್ಕಾಗಿ ರೂಂ ವಿಸ್ತರಣೆ ಮಾಡಿದ್ದರು. ನಿನ್ನೆ ಸಂಜೆ ರೂಂ ಚೆಕ್ ಔಟ್ ಮಾಡಬೇಕಾಗಿತ್ತು. ಆದರೆ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ತಪಾಸಣೆ ನಡೆಸಲಾಗಿದೆ. ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಭೇಟಿ ಪರಿಶೀಲನೆ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!