
ಬೆಂಗಳೂರು (ಏ.26): ಕರಗೋತ್ಸವದ ವೇಳೆ ನೃತ್ಯ ಮಾಡುವಾಗ ಮೈ ತಾಕಿದ ವಿಚಾರವಾಗಿ ಅಪ್ರಾಪ್ತ ಬಾಲಕರ ನಡುವೆ ಉಂಟಾದ ಜಗಳವು ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಗಾಂಧಿನಗರದ ಅಣ್ಣಮ್ಮ ದೇವಾಲಯ ಸಮೀಪ ನಡೆದಿದೆ. ಶೇಷಾದ್ರಿಪುರದ ಜೆಸಿಡಬ್ಲ್ಯು ಕಾಲೋನಿ ನಿವಾಸಿ ಸಾರಥಿ (17) ಕೊಲೆಯಾದ ದುರ್ದೈವಿ. ಈ ಕೊಲೆ ಪ್ರಕರಣ ಸಂಬಂಧ ನಾಲ್ವರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರಗ ನಿಮಿತ್ತ ಗಾಂಧಿನಗರದ ಅಣ್ಣಮ್ಮ ದೇವಾಲಯದ ಬಳಿ ಬುಧವಾರ ನಸುಕಿನಲ್ಲಿ ಅಪ್ರಾಪ್ತರು ಕುಣಿಯುುವಾಗ ಈ ಕೃತ್ಯ ನಡೆದಿದೆ. ತನ್ನ ಪೋಷಕರ ಜತೆ ನೆಲೆಸಿದ್ದ ಮೃತ ಸಾರಧಿ, ಕೂಲಿ ಕೆಲಸ ಮಾಡಿಕೊಂಡಿದ್ದ. ಕರಗ ನೋಡಲು ಗಾಂಧಿನಗರದ ಅಣ್ಣಮ್ಮ ದೇವಾಲಯ ಬಳಿ ತೆರಳಿದ್ದಾನೆ. ಕರಗ ಸಾಗುವಾಗ ಬುಧವಾರ ನಸುಕಿನ 3.30ರ ಸುಮಾರಿಗೆ ಹುಡುಗರ ಜತೆ ಆತನೂ ಕುಣಿಯಲು ಶುರು ಮಾಡಿದ್ದಾನೆ.
ಕರ್ನಾಟಕ Election 2024 Live: ದಕ್ಷಿಣದ 14 ಜಿಲ್ಲೆಗಳಿಗೆ ಇಂದು ಮತದಾನ
ಆಗ ಇತರೆ ಹುಡುಗರಿಗೆ ಮೈ ತಾಕಿದೆ. ಇದೇ ವಿಚಾರವಾಗಿ ಹುಡುಗರ ಮಧ್ಯೆ ಜಗಳವಾಗಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೋಪಗೊಂಡ ಅಪ್ರಾಪ್ತ ಬಾಲಕರು, ಸಾರಥಿ ಎದೆಗೆ ಹೂ ಕತ್ತರಿಸುವ ಕತ್ತರಿಯಿಂದ ಇರಿದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡು ಸಾರಥಿ ಮೃತಪಟ್ಟಿದ್ದಾನೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆರೋಪಿತ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ