ಚಿನ್ನ ಅಕ್ರಮ ಮಾರಾಟಕ್ಕೆ ಯತ್ನ: ನಾಲ್ವರ ಬಂಧನ

Kannadaprabha News   | Asianet News
Published : Dec 06, 2020, 07:31 AM IST
ಚಿನ್ನ ಅಕ್ರಮ ಮಾರಾಟಕ್ಕೆ ಯತ್ನ: ನಾಲ್ವರ ಬಂಧನ

ಸಾರಾಂಶ

ಚಿನ್ನವನ್ನು ಕರಗಿಸಿ ಬಿಸ್ಕೆಟ್‌ಗಳನ್ನಾಗಿ ಪರಿವರ್ತಿಸುತ್ತಿದ್ದ ಆರೋಪಿಗಳು| ಚಿನ್ನದ ಮೇಲೆ ಶುದ್ಧತೆ ಬಗ್ಗೆ ನಕಲಿ ಸೀಲು ಹಾಕಿ ಮಾರುತ್ತಿದ್ದ ಖದೀಮರು| ಸಣ್ಣಪುಟ್ಟ ವ್ಯಾಪಾರಿಗಳಿಗೆ ಪರಿಶುದ್ಧವಾದ ಚಿನ್ನದ ಗಟ್ಟಿ ಎಂದು ಸುಳ್ಳು ಹೇಳಿ ಯಮಾರಿಸುತ್ತಿದ್ದ ಆರೋಪಿಗಳು| 

ಬೆಂಗಳೂರು(ಡಿ.06): ನಗರ್ತಪೇಟೆಯ ಕೆಂಪಣ್ಣ ಲೇನ್‌ನಲ್ಲಿ ನಾಲ್ಕನೆ ಮಹಡಿಯಲ್ಲಿರುವ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಚಿನ್ನಾಭರಣ ಮಾರಾಟಕ್ಕೆ ಯತ್ನಿಸಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಚಿನ್ನಾಭರಣ ವ್ಯಾಪಾರಿಗಳಾದ ನಿಖಿಲ್‌, ಗೌರವ್‌, ಗೌರವ್‌ ಹಾಗೂ ಸಮೀರ್‌ ಬಂಧಿತರು. ಆರೋಪಿಗಳಿಂದ 1 ಕೆ.ಜಿ. 477 ಗ್ರಾಂ ಚಿನ್ನ ಹಾಗೂ 98 ಸಾವಿರ ನಗದು ಜಪ್ತಿ ಮಾಡಲಾಗಿದೆ. ಚಿನ್ನವನ್ನು ಕರಗಿಸಿ ಬಿಸ್ಕೆಟ್‌ಗಳನ್ನಾಗಿ ಪರಿವರ್ತಿಸುತ್ತಿದ್ದ ಆರೋಪಿಗಳು, ಬಳಿಕ ಆ ಚಿನ್ನದ ಮೇಲೆ ಶುದ್ಧತೆ ಬಗ್ಗೆ ನಕಲಿ ಸೀಲು ಹಾಕಿ ಮಾರುತ್ತಿದ್ದರು. ನಿಗದಿತ ಪ್ರಮಾಣಕ್ಕಿಂತ ಕಡಿಮೆ ಚಿನ್ನದ ಅಂಶ ಇರುತ್ತಿತ್ತು. ಇದರಿಂದ ಆರೋಪಿಗಳು ಲಾಭ ಮಾಡಿಕೊಳ್ಳುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

40 ಲಕ್ಷಕ್ಕಾಗಿ ಪತ್ನಿಯಿಂದಲೇ ಪತಿ ಕಿಡ್ನಾಪ್‌..!

ಮಹಾರಾಷ್ಟ್ರ ಮೂಲದ ಆರೋಪಿಗಳು, ಹಲವು ವರ್ಷಗಳಿಂದ ನಗರ್ತಪೇಟೆಯಲ್ಲಿ ಚಿನ್ನಾಭರಣ ಮಳಿಗೆ ಹೊಂದಿದ್ದಾರೆ. ಸಗಟು ರೂಪದಲ್ಲಿ ಚಿನ್ನ ಮಾರುತ್ತಿದ್ದರು. ಸಣ್ಣಪುಟ್ಟ ವ್ಯಾಪಾರಿಗಳಿಗೆ ಪರಿಶುದ್ಧವಾದ ಚಿನ್ನದ ಗಟ್ಟಿ ಎಂದು ಸುಳ್ಳು ಹೇಳಿ ಯಮಾರಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?