ಪ್ರತ್ಯೇಕ ಪ್ರಕ​ರ​ಣ: ಮಾದಕ ವಸ್ತು ಮಾರಾಟಕ್ಕೆ ಯತ್ನ, ನಾಲ್ವರ ಬಂಧ​ನ

Kannadaprabha News   | Asianet News
Published : Jan 22, 2021, 01:56 PM IST
ಪ್ರತ್ಯೇಕ ಪ್ರಕ​ರ​ಣ: ಮಾದಕ ವಸ್ತು ಮಾರಾಟಕ್ಕೆ ಯತ್ನ,  ನಾಲ್ವರ ಬಂಧ​ನ

ಸಾರಾಂಶ

ಕುತ್ತಾರಿನ ದೆಕ್ಕಾಡು ಪರಿಸರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ| ದೇರಳಕಟ್ಟೆಯಿಂದ ಮುಡಿಪು ಕಡೆಗೆ ಮಹಾರಾಷ್ಟ್ರ ನೋಂದಾಯಿತ ವರ್ನಾ ಕಾರಿನಲ್ಲಿ ಗಾಂಜಾ ಸಾಗಾಟ| ಈ ಸಂಬಂಧ ಉಳ್ಳಾಲ ಮತ್ತು ಕೊಣಾಜೆ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲು|  

ಉಳ್ಳಾಲ(ಜ.22): ಅಪಾರ ಪ್ರಮಾ​ಣದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಂಡವನ್ನೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಕೊಣಾಜೆ ಮತ್ತು ಉಳ್ಳಾಲ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ನರಿಂಗಾನದ ತೌಡುಗೋಳಿ ಕ್ರಾಸ್‌ ನಿವಾಸಿ ಅಬ್ದುಲ್‌ ಅಝೀಝ್‌ ಯಾನೆ ಪೋರ್ಕ ಅಝೀಝ್‌ (40) ಮತ್ತು ಹಫೀಝ್‌ ಯಾನೆ ಅಪ್ಪಿ ಯಾನೆ ಮೊಯ್ದೀನ್‌ (34) ಬಂಧಿ​ತರು. ಇವರು, ಕುತ್ತಾರಿನ ದೆಕ್ಕಾಡು ಪರಿಸರದಲ್ಲಿ ಇಬ್ಬರು ಆರೋಪಿಗಳು 23.980 ಕಿಲೋ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ತಂಡ ವಶಕ್ಕೆ ಪಡೆದುಕೊಂಡು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗಾಂಜಾ ಸಾಗಾಟಕ್ಕೆಂದೇ ಐಷಾರಾಮಿ ಕಾರು ಖರೀದಿಸಿದ್ದ ಖದೀಮರು..!

ಇನ್ನೊಂದು ಪ್ರಕರಣದಲ್ಲಿ ತೆಲಂಗಾಣ ಮೂಲದ ವಿಠಲ್‌ ಚೌಹಾನ್‌ ಮತ್ತು ಬೀದರ್‌ ನಿವಾಸಿಗಳಾದ ಸಂಜೀವ್‌ ಕುಮಾರ್‌, ಕಲ್ಲಪ್ಪ ಎಂಬವರನ್ನು ದೇರಳಕಟ್ಟೆಯಿಂದ ಮುಡಿಪು ಕಡೆಗೆ ಮಹಾರಾಷ್ಟ್ರ ನೋಂದಾಯಿತ ವರ್ನಾ ಕಾರಿನಲ್ಲಿ ಗಾಂಜಾ ಸಾಗಾಟ ನಡೆಸುತ್ತಿರುವಾಗ ವಶಕ್ಕೆ ಪಡೆಯಲಾಗಿದೆ. ಇವರಿಂದ ಸುಮಾರು 15 ಕೆ.ಜಿ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಮತ್ತು ಕೊಣಾಜೆ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!