Bengaluru crime: ಮೆಟ್ರೋ ಅಧಿಕಾರಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಲ್ಲಿ ಸಾಲದ ಖದೀಮರು!

Published : Jun 06, 2023, 05:43 AM IST
Bengaluru crime: ಮೆಟ್ರೋ ಅಧಿಕಾರಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಲ್ಲಿ ಸಾಲದ ಖದೀಮರು!

ಸಾರಾಂಶ

ಮೆಟ್ರೋ ಎಂಜಿನಿಯರ್‌ವೊಬ್ಬರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ಬ್ಯಾಂಕ್‌ನಲ್ಲಿ ಕಿಡಿಗೇಡಿಗಳು ಸಾಲ ಪಡೆದಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು (ಜೂ.7) : ಮೆಟ್ರೋ ಎಂಜಿನಿಯರ್‌ವೊಬ್ಬರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ಬ್ಯಾಂಕ್‌ನಲ್ಲಿ ಕಿಡಿಗೇಡಿಗಳು ಸಾಲ ಪಡೆದಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ವಿಧಾನಸೌಧ(Vidhanasoudha) ಮುಂದಿನ ಮೆಟ್ರೋ ನಿಲ್ದಾಣದ ಎಂಜಿನಿಯರ್‌ ಬಿ.ಆರ್‌.ನವೀನ್‌ಕುಮಾರ್‌(BR Naveen kumar) ವಂಚನೆಗೊಳಗಾಗಿದ್ದು, ಇತ್ತೀಚೆಗೆ ನವೀನ್‌ ಅವರ ಮನೆಗೆ ಬ್ಯಾಂಕ್‌ನಿಂದ ಬಂದ ಪತ್ರ ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗದ ಸಿಇಎನ್‌ ಠಾಣೆಯಲ್ಲಿ ನವೀನ್‌ಕುಮಾರ್‌ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಎಂ ಕಚೇರಿ ಹೆಸರಿನಲ್ಲಿ ವಂಚನೆ ಪ್ರಕರಣ: ವ್ಯಕ್ತಿಗೆ ಜಾಮೀನು

ಮೆಟ್ರೋ ನಿಲ್ದಾಣದ ಎಂಜಿನಿಯರ್‌ ಆಗಿರುವ ನವೀನ್‌ಕುಮಾರ್‌ ಅವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ .51,839 ಸಾವಿರವನ್ನು ಕಿಡಿಗೇಡಿಗಳು ಸಾಲ ಪಡೆದಿದ್ದರು. ಬಳಿಕ ಅವರ ವಿಳಾಸಕ್ಕೆ ಬ್ಯಾಂಕ್‌ನಿಂದ ಪತ್ರ ನೋಡಿ ಗಾಬರಿಗೊಂಡ ನವೀನ್‌ ಗಾಬರಿಯಾಗಿದೆ. ತಾವು ಯಾವುದೇ ಅರ್ಜಿ ಸಲ್ಲಿಸದಿದ್ದರೂ ಸಾಲ ಮಂಜೂರಾಗಿದೆ ಎಂದು ಬ್ಯಾಂಕ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ನವೀನ್‌ ಹೆಸರಿನಲ್ಲಿ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಎಫ್‌ಬಿ ಖಾತೆ ಮೂಲಕ ವಂಚನೆ

ಮಂಗಳೂರು: ನಕಲಿ ಫೇಸ್‌ಬುಕ್‌ ಖಾತೆಯ ಮೂಲಕ 80 ಸಾವಿರ ರು. ವಂಚಿಸಿರುವ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಆರ್‌ಬಿಐ ಪೊಲೀಸರ ಸೋಗು! ವೈದ್ಯೆಯಿಂದ ಕೋಟಿ ಕೋಟಿ ಪೀಕಿದ ಖದೀಮರು

ದೂರುದಾರರಿಗೆ ಅವರ ಪರಿಚಿತರೊಬ್ಬರ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಮಾಡಿದ ಅಪರಿಚಿತ ವ್ಯಕ್ತಿ, ಮೆಸೆಂಜರ್‌ ಮೂಲಕ ‘ಸ್ನೇಹಿತನ ಮಗ ತೀವ್ರನಿಗಾ ಘಟಕದಲ್ಲಿದ್ದು ತುರ್ತಾಗಿ ಒಂದು ಲಕ್ಷ ರು. ಹಣದ ಅಗತ್ಯವಿದೆ’ ಎಂದು ಸಂದೇಶ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು, ಅಪರಿಚಿತ ವ್ಯಕ್ತಿ ಕಳುಹಿಸಿದ್ದ ಗೂಗಲ್‌ ಪೇ ಸಂಖ್ಯೆಗೆ ಹಂತ ಹಂತವಾಗಿ ಒಟ್ಟು 80 ಸಾವಿರ ರು. ವರ್ಗಾಯಿಸಿದ್ದಾರೆ. ಅನಂತರ ಇದೊಂದು ನಕಲಿ ಫೇಸ್‌ಬುಕ್‌ ಖಾತೆ ಮೂಲಕ ನಡೆದಿರುವ ವಂಚನೆ ಎಂಬುದಾಗಿ ಅವರಿಗೆ ಗೊತ್ತಾಗಿದ್ದು ಪ್ರಕರಣ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!