
ಬೆಂಗಳೂರು(ಮೇ.19): ಜಮ್ಮು-ಕಾಶ್ಮೀರ ರಾಜ್ಯದಲ್ಲಿರುವ ಸುಪ್ರಸಿದ್ಧ ವೈಷ್ಣೋದೇವಿ ದರ್ಶನಕ್ಕೆ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡುವ ಸೋಗಿನಲ್ಲಿ ವೃದ್ಧರೊಬ್ಬರಿಗೆ ಕಿಡಿಗೇಡಿಗಳು ವಂಚಿಸಿದ್ದಾರೆ.
ವಿವೇಕನಗರದ ವಿ.ಸಂಗುಜನ್ ಮೋಸ ಹೋಗಿದ್ದು, ಇತ್ತೀಚಿಗೆ ವೈಷ್ಣೋದೇವಿ ದೇವಸ್ಥಾನಕ್ಕೆ ಪ್ರಯಾಣಿಸಲು ಆನ್ಲೈನ್ ಮೂಲಕ ಹೆಲಿಕ್ಯಾಪ್ಟರ್ ಬುಕ್ ಮಾಡಲು ಯತ್ನಿಸಿದ್ದಾಗ ಟೋಪಿ ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್: ಹಣಕ್ಕಾಗಿ ಕೂಲಿ ಕಾರ್ಮಿಕರ ಬರ್ಬರ ಕೊಲೆ!
ವೈಷ್ಣೋದೇವಿ ದರ್ಶನಕ್ಕೆ ತೆರಳಲು ಯೋಜಿಸಿದ್ದ ಸಂಗುಜನ್ ಅವರು, ಕೆಲ ದಿನಗಳ ಹಿಂದೆ ಹೆಲಿಕಾಪ್ಟರ್ ಸೇವೆ ಪಡೆಯಲು ಶ್ರೀ ಮಾತಾ ವೈಷ್ಣೋದೇವಿ ಶ್ರೈನಿ ಬೋರ್ಡ್ ಕಾಲ್ ಸೆಂಟರ್ಗೆ ಕರೆ ಮಾಡಿದ್ದರು. ಆದರೆ ಕಾಲ್ ಸೆಂಟರ್ ಸಿಬ್ಬಂದಿ ಪ್ರತಿಕ್ರಿಯಿಸದೆ ಹೋದಾಗ ಅವರು ಸುಮ್ಮನಾಗಿದ್ದರು. ಕೆಲ ಹೊತ್ತಿನ ಬಳಿಕ ಸಂಗುಜನ್ ಅವರ ಮೊಬೈಲ್ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ತಾವು ಹೆಲಿಕ್ಯಾಪ್ಟರ್ ಬುಕ್ ಮಾಡಿ ಕೊಡುವುದಾಗಿ ಮಾಹಿತಿ ಪಡೆದುಕೊಂಡಿದ್ದಾನೆ. ಬಳಿಕ ಬುಕ್ಕಿಂಗ್ ಶುಲ್ಕ ಮತ್ತು ಟಿಕೆಟ್ ಶುಲ್ಕದ ನೆಪದಲ್ಲಿ 1.57 ಲಕ್ಷ ರು ಅನ್ನು ಆನ್ಲೈನ್ನಲ್ಲಿ ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ