
ಚನ್ನಪಟ್ಟಣ(ಅ.21): ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಯುವತಿಯೊಬ್ಬಳಿಗೆ 5.43 ಲಕ್ಷ ರು. ವಂಚಿಸಿರುವ ಘಟನೆ ತಾಲೂಕಿನ ದೇವರಹೊಸಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಡಿ.ಸಿ.ಲಾವಣ್ಯ(28) ಹಣ ಕಳೆದುಕೊಂಡವರು. ಎಂಜಿನಿಯರಿಂಗ್ ಪೂರೈಸಿದ್ದ ಯುವತಿಗೆ 4 ದಿನಗಳ ಹಿಂದೆ ವಾಟ್ಸಾಪ್ನಲ್ಲಿ ವರ್ಕ್ ಫ್ರಂ ಹೋಂ ಅವಕಾಶವಿದೆ. ಕೆಲವು ಟಾಸ್ಕ್ಗಳನ್ನು ಪೂರೈಸಿದರೆ ಹಣ ಬರುತ್ತದೆ ಎಂಬ ಸಂದೇಶ ಬಂದಿದೆ. ಇದನ್ನು ನಂಬಿದ ಯುವತಿ ಸಂದೇಶದಲ್ಲಿ ಸೂಚಿಸಿದ್ದ ವೆಬ್ಸೈಟ್ಗೆ ಲಾಗಿನ್ ಆಗಿದ್ದಾಳೆ.
ರಾಮನಗರ: ಸ್ನೇಹಿತರ ಜತೆ ಕುಡಿಯಲು ಹೋಗಿದ್ದ ವೇಳೆ ರೌಡಿ ಶೀಟರ್ ಬರ್ಬರ ಹತ್ಯೆ
ಆಗ ಯುವತಿಗೆ ಕೆಲವು ಟಾಸ್ಕ್ಗಳನ್ನು ಖರೀದಿಸುವಂತೆ ಸೂಚಿಸಿದ್ದು, ವಂಚಕರು ಸೂಚಿಸಿದ ವಿವಿಧ ಯುಪಿಐ ಐಡಿಗೆ ಒಂದು ಸಾವಿರ, 5 ಸಾವಿರ, 7 ಸಾವಿರದಂತೆ ಲಾವಣ್ಯ ಮೂರು ಬಾರಿ ಹಣ ವರ್ಗಾವಣೆ ಮಾಡಿದ್ದಾಳೆ. ಆ ನಂತರ ತಮ್ಮ ಹಣವನ್ನು ಮರಳಿ ಪಡೆಯಲು ಮತ್ತೆ ಹಣ ಹೂಡಿಕೆ ಮಾಡುವಂತೆ ಸೂಚಿಸಿದ್ದು, ಅದರಂತೆ ಯುವತಿ ಇನ್ನೊಂದು ಬ್ಯಾಂಕ್ ಖಾತೆಯಿಂದ ಮತ್ತೆ 68 ಸಾವಿರ, 28 ಸಾವಿರ, 1.36 ಲಕ್ಷ, 2.98 ಲಕ್ಷ ಹಣವನ್ನು ವಂಚಕರು ಸೂಚಿಸಿದಂತೆ ವರ್ಗಾಯಿಸಿದ್ದು, ಒಟ್ಟು 5.43 ಲಕ್ಷ ಹಣವನ್ನು ಕಳೆದುಕೊಂಡಿದ್ದಾಳೆ. ರಾಮನಗರದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ