ವಿವಿ ಕುಲಪತಿಗಳ ವಾಟ್ಸಪ್‌ ಡಿಪಿ ಬಳಸಿ ಹಣ ಕೇಳಿದ ವಂಚಕರು..!

Published : Dec 30, 2023, 06:22 AM IST
ವಿವಿ ಕುಲಪತಿಗಳ ವಾಟ್ಸಪ್‌ ಡಿಪಿ ಬಳಸಿ ಹಣ ಕೇಳಿದ ವಂಚಕರು..!

ಸಾರಾಂಶ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಪರಶಿವಮೂರ್ತಿ ಅವರು ಒಂದೇ ದಿನ ವಂಚನೆಗೆ ಒಳಗಾಗಿದ್ದಾರೆ. 

ಹುಬ್ಬಳ್ಳಿ(ಡಿ.30):  ರಾಜ್ಯದ 2 ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಕುಲಪತಿಗಳ ವಾಟ್ಸಪ್‌ ಡಿಪಿ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದ್ದು, ಇಬ್ಬರೂ ಪೊಲೀಸರಿಗೆ ದೂರು ನೀಡಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಪರಶಿವಮೂರ್ತಿ ಅವರು ಒಂದೇ ದಿನ ವಂಚನೆಗೆ ಒಳಗಾಗಿದ್ದಾರೆ. 

ವಂಚಕರು ಈ ಇಬ್ಬರ ವಾಟ್ಸಾಪ್‌ ಡಿಪಿ ಬಳಸಿ ರಾಜ್ಯಪಾಲರ ಕಚೇರಿ ಅಧಿಕಾರಿಗಳು, ವಿವಿ ಕುಲಸಚಿವರು, ಹಿರಿಯ ಪ್ರಾಧ್ಯಾಪಕರು ಹಾಗೂ ಅವರ ಸ್ನೇಹಿತ ಬಳಗಕ್ಕೆ ಈ ರೀತಿ ಮೊಬೈಲ್‌ ಸಂದೇಶ ಕಳುಹಿಸಿದ್ದಾರೆ.

QR ಕೋಡ್ ಸ್ಕ್ಯಾನ್ ಎಚ್ಚರ, ಹೈಟೆಕ್ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ಬೆಂಗಳೂರು ನಿವಾಸಿ!

ಹಣ ಕೇಳಿರುವ ಕುರಿತು ಕುಲಪತಿಗಳಿಗೆ ಸ್ನೇಹಿತರು, ಸಹೋದ್ಯೋಗಿಗಳಿಂದ ದೂರವಾಣಿ ಕರೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡು ನನ್ನ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ ಕೊಡಬೇಡಿ ಎಂದು ವಾಟ್ಸಪ್‌ ಹಾಗೂ ಫೇಸಬುಕ್‌ನಲ್ಲಿ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಕವಿವಿ ಕುಲಪತಿಗಳಿಗೆ 9690790991 ಎಂಬ ನಂಬರ್‌ನ ವಿಶಾಲ್‌ ಕಟಾರಿಯಾ ಹೆಸರಿನಲ್ಲಿ ಈ ಮಾಹಿತಿ ಹಾಕಲಾಗಿದೆ.

ಕವಿವಿ ಕುಲಪತಿಗಳು ಸೆನ್‌ (ಸೈಬರ್‌) ಪೊಲೀಸರಿಗೆ ದೂರು ಸಲ್ಲಿಸಿದ್ದು, ಕನ್ನಡ ವಿವಿ ಕುಲಪತಿಗಳು ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!