
ಬೆಂಗಳೂರು (ಫೆ.19): ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ವಂಚನೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಜಯನಗರ ಪೊಲೀರು ವಂಚಕರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 70 ಲಕ್ಷ ಹಣ ಮತ್ತು ಒಂದು ಪಾತ್ರೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಪೋರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಸ್ಗೆ 14 ದಿನ ನ್ಯಾಯಾಂಗ ಬಂಧನ, ಮುಸ್ಲಿಮರ ಪ್ರತಿಭಟನೆ
ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಬಂಧಿತ ವಂಚಕರಾಗಿದ್ದು, ಉದ್ಯಮಿಯೊಬ್ಬರಿಗೆ ಪಾತ್ರೆ ತೋರಿಸಿದ ಗ್ಯಾಂಗ್ ಆಪಾರ ಶಕ್ತಿಯನ್ನ ಹೊಂದಿರುವ ಅದೃಷ್ಟದ ಪಾತ್ರೆ. ಈ ಪಾತ್ರೆಗೆ ಮಾರ್ಕೆಟ್ ನಲ್ಲಿ ಕೋಟ್ಯಾಂತರ ರೂ ಬೆಲೆ ಇದೆ. ಒಂದುವರೆ ಕೋಟಿ ಹಣ ನೀಡಿದ್ರೆ ತಮಗೆ ಈ ಅದೃಷ್ಟದ ಪಾತ್ರೆ ಕೊಡೋದಾಗಿ ಗ್ಯಾಂಗ್ ಉದ್ಯಮಿಯನ್ನು ನಂಬಿಸಿತ್ತು.
ಹೀಗೆ ಪಾತ್ರೆಯನ್ನಿಟ್ಟುಕೊಂಡು ಉದ್ಯಮಿಗೆ ಬಲೆ ಹೆಣೆದ ವಂಚಕ ಗ್ಯಾಂಗ್ ಬಳಿಕ 70 ಲಕ್ಷಕ್ಕೆ ಡೀಲ್ ಕುದುರಿಸಿತ್ತು. ಈ ಬಗ್ಗೆ ಮಾಹಿತಿ ಸಿಕ್ಕಿದ ಹಿನ್ನೆಲೆ ತಕ್ಷಣ ಪೊಲೀಸರು ಅಲರ್ಟ್ ಆಗಿ ದಾಳಿ ನಡೆಸಿದ್ದು, ಸದ್ಯ ಆರೋಪಿಗಳನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ