
ಪೀಣ್ಯ ದಾಸರಹಳ್ಳಿ (ಜು.17) : ಗುಂಪೊಂದು ಮಹಿಳಾ ಸಾಫ್್ಟವೇರ್ ಎಂಜಿನಿಯರ್ ಅವರನ್ನು ರೇಗಿಸಿದ್ದಲ್ಲದೆ ಅವರ ಕಾರಿನ ಗ್ಲಾಸ್ ಒಡೆದು ಹಾಕಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳಾ ಟೆಕ್ಕಿಯೊಬ್ಬರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿದ ನಾಲ್ಕು ಜನ ಆರೋಪಿಗಳ ಗುಂಪು ಆಕೆಯ ಮೊಬೈಲ್ ನಂಬರ್ ಕೇಳಿದ್ದಾರೆ. ನನ್ನ ಮೊಬೈಲ್ ನಂಬರ್ ನಿಮಗೇಕೆ ಕೊಡಬೇಕು ಎಂದಾಗ ಸುಮ್ಮನೆ ಟೈಂ ಪಾಸ್ಗೆ ಕೊಡಿ ಎಂದಿದ್ದಾರೆ. ಈ ವೇಳೆ ಟೆಕ್ಕಿ ಪ್ರತಿಕ್ರಿಯಿಸದೆ ಅಲ್ಲಿಂದ ಮನೆಗೆ ತೆರಳಿದ್ದಾರೆ.
Bengaluru: ಭಿಕ್ಷಾಟನೆ ಬಿಟ್ಟು ರಾಬರಿಗಿಳಿದ ಮಂಗಳಮುಖಿಯರು: ಟೆಕ್ಕಿಗಳೇ ಇವರ ಟಾರ್ಗೆಟ್
ಇದಾದ ಕೆಲವೇ ಹೊತ್ತಲ್ಲಿ ಆಕೆಯ ಮನೆ ಬಳಿಗೆ ನಡೆದುಕೊಂಡು ಬರುವ ಇಬ್ಬರು ವ್ಯಕ್ತಿಗಳು ಕಲ್ಲು ತೆಗೆದುಕೊಂಡು ಕಾರಿನ ಹಿಂಬದಿ ಗಾಜನ್ನು ಒಡೆದಿದ್ದಾರೆ. ಇದಾದ ಐದೇ ನಿಮಿಷಗಳಲ್ಲಿ ಮತ್ತಿಬ್ಬರು ಬೈಕ್ನಲ್ಲಿ ಬಂದು ತಾವೇ ತಂದಿದ್ದ ಕಲ್ಲನ್ನು ಕಾರಿನ ಗಾಜಿಗೆ ಎಸೆದು ಪರಾರಿಯಾಗಿದ್ದಾರೆ. ಈ ಘಟನೆ ನಡೆದಿರುವುದು ಯಾವುದೋ ಹಳೇ ದ್ವೇಷಕ್ಕೆ ಇರಬಹುದು ಎಂದು ಪೀಣ್ಯ ಪೊಲೀಸರು ಶಂಕಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳಲ್ಲಿ ಒಬ್ಬ ವೆಂಕಟೇಶ್ ಎಂದು ಪೊಲೀಸರು ಗುರುತಿಸಿದ್ದಾರೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೀಣ್ಯ ಪೊಲೀಸರು ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ