
ಗಂಗಾವತಿ (ಜೂ.17): ಕಳೆದ 8 ವರ್ಷಗಳ ಹಿಂದೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಜರುಗಿದ ಅಪ್ರಾಪ್ತ ಬಾಲಕಿ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಲಯವು ನಾಲ್ಕು ಜನರಿಗೆ 2 ವರ್ಷ ಜೈಲು ಮತ್ತು ತಲಾ 10 ಸಾವಿರ ರು ದಂಡ ವಿಧಿಸಿ ತೀರ್ಪು ನೀಡಿದೆ.
2018ರಲ್ಲಿ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಗುಡದಪ್ಪ ಎನ್ನುವವರ ಜೊತೆ ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿತ್ತು. ಆಗಿನ ಸಿಪಿಐ ಆಗಿದ್ದ ಪ್ರಕಾಶ ಮಾಳೆ ಅವರು ನ್ಯಾಯಲಯಕ್ಕೆ ದೋಷರೋಪಣಪಟ್ಟಿ ನೀಡಿದ್ದರು.
ಈ ಪ್ರಕರವನ್ನು ಕೈಗೆತ್ತಿಕೊಂಡಿದ್ದ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಲಯದ ನ್ಯಾಯಧೀಶರಾದ ನಾಗೇಶ ಪಾಟೀಲ್ ಅವರು ಸಾಕ್ಷಾಧಾರಗಳಿಂದ ವಿಚಾರಣೆ ಕೈಗೊಂಡಿದ್ದ ಸಂದರ್ಭದಲ್ಲಿ ದೃಢ ಪಟ್ಟಿದ್ದರಿದಂದ ವಿವಾಹವಾಗಿದ್ದ ಗುಡದಪ್ಪ, ಈತನ ತಂದೆ ಮರಿಯಪ್ಪ, ತಾಯಿ ಹುಲಿಗೆಮ್ಮ ಮತ್ತು ಬಾಲಕಿ ತಾಯಿ ಚೆನ್ನಮ್ಮ ಅವರು ದೋಷಿಗಳೆಂದು ತೀರ್ಪ ನೀಡಿ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ದಂಡ ವಿಧಿಸುವಂತೆ ತೀರ್ಪು ನೀಡಿದ್ದಾರೆ. ಸರಕಾರಿ ಅಭಿಯೋಜಕರಾದ ನಿರಂಜನಸ್ವಾಮಿ ಹಿರೇಮಠ ಅವರು ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ