
ಮಾಗಡಿ (ಜು.22): ಗ್ಯಾಸ್ ಗೀಸರ್ ನಿಂದ ನೀರು ಕಾಯಿಸಿ ಸ್ನಾನ ಮಾಡಲು ತೆರಳುವಾಗ ಎಚ್ಚರವಿರಲಿ. ಗ್ಯಾಸ್ ಗೀಸರ್ ನ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಿಂದ ತಾಯಿ ಮಗ ದುರಂತ ಸಾವು ಕಂಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿಯ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ( 40 ) ದಿಲೀಪ್ (17). ಮೃತ ದುರ್ದೈವಿಗಳಾಗಿದ್ದಾರೆ. ಬಿಸಿ ನೀರು ಕಾಯಿಸಲು ಪುತ್ರ ದಿಲೀಪ್ ಗ್ಯಾಸ್ ಗೀಜರ್ ಆನ್ ಮಾಡಿದ್ದ. ಈ ವೇಳೆ ಅನಿಲ ಸೋರಿಕೆಯಾಗಿದೆ. ಉಸಿರು ಕಟ್ಟಿ ದಿಲೀಪ್ ಸಾವು ಕಂಡಿದ್ದಾನೆ.
ಇನ್ಸ್ಟಾಗ್ರಾಮ್ ನಲ್ಲಿ ರೌಡಿ ಶೀಟರ್ಗಳ ರೀಲ್ಸ್ , ಅಪ್ರಾಪ್ತರೇ ಟಾರ್ಗೆಟ್, 60ಕ್ಕೂ ಹೆಚ್ಚು ಅಕೌಂಟ್ ಪತ್ತೆ!
ಮಗನನ್ನು ನೋಡಲು ಸ್ನಾನ ಗೃಹಕ್ಕೆ ತೆರಳಿದ ತಾಯಿ ಕೂಡ ಗ್ಯಾಸ್ ಗೀಸರ್ ವಿಷಾನಿಲ ಸೇವಿಸಿ ಪ್ರಜ್ಞೆ ತಪ್ಪಿ ಸಾವು ಕಂಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಇಬ್ಬರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಭಾನುವಾರ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ