
ಚಿಕ್ಕಬಳ್ಳಾಪುರ, (ಸೆ.22): ಜಿಲ್ಲೆಯ ಗೌರಿಬಿದನೂರು: ನಗರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆಂಧ್ರ ಮೂಲದ ಇಬ್ಬರು ಕುಖ್ಯಾ ಬೈಕ್ ಕಳ್ಳರಿಬ್ಬರು ಸೇರಿ ನಾಲ್ವರು ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನೆರೆಯ ಆಂಧ್ರಪ್ರದೇಶದ ಹಿಂದೂಪುರದ ನಿವಾಸಿ ಜಬೀವುಲ್ಲಾ ಅಲಿಯ್ ಕಾಲಿಯಾ, ಕೃಷ್ಣಪ್ಪ ಹಾಗು ಬಾಗೇಪಲ್ಲಿ ತಾಲೂಕಿನ ಘಂಟಂವಾರಲ್ಲಿ ನಿವಾಸಿ ಸಿಂಹಾದ್ರಿ, ಗೌರಿಬಿದನೂರು ತಾಲೂಕಿನ ನಗರಗೆರೆ ಹೋಬಳಿ ವೇದಲವಣಿ ನಿವಾಸಿ ನಂದೀಶ್ ಕುಮಾರ್.
ಮಾಲ್ ಇದ್ಯಾ ಪ್ಲೀಸ್ ಎಂದ ದೀಪಿಕಾ, ಭಾರಿ ಮಳೆ ಭೀತಿಯಲ್ಲಿ ಕರ್ನಾಟಕ: ಸೆ.22ರ ಟಾಪ್ 10 ಸುದ್ದಿ!
ಬಂಧಿತರಿಂದ 2.50 ಲಕ್ಷ ಹಣ, 9 ಬೈಕ್ಗಳನ್ನ ವಶ ಪಡಿಸಿಕೊಂಡು ಆರೋಪಿಗಳನ್ನ ವಿಚಾರಣೆ ಮುಂದುವರಿಸಿದ್ದಾರೆ.
ಗೌರಿಬಿದೂರು ಪಟ್ಟಣದಲ್ಲಿ ಪದೇ ಪದೇ ಸಾರ್ವಜನಿಕ ಸ್ಥಳಗಳಲ್ಲಿ ದ್ವಿಚಕ್ರ ವಾಹನಗಳು ಕಳವು ಪ್ರಕರಣಗಳು ನಡೆಯುತ್ತಿದ್ದವು. ಬಗ್ಗೆ ಮಾಲೀಕರಿಂದ ಬಂದ ದೂರುಗಳ ಹಿನ್ನಲೆಯಲ್ಲಿ ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ರವಿಶಂಕರ್ ಮಾರ್ಗದರ್ಶನದಲ್ಲಿ ಗೌರಿಬಿದನೂರು ತಾಲೂಕಿನ ಸಿಪಿಐ ಎಸ್.ರವಿ ನೇತೃತ್ವದಲ್ಲಿ ನಗರ ಠಾಣೆ ಪಿಎಸ್ಐ ಚಂದ್ರಕಲಾ ತಂಡ ಕಾರ್ಯಚರಣೆ ನಡೆಸಿದೆ.
ಈ ವೇಳೆ ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಕಾರ್ಯಚರಣೆಯಲ್ಲಿ ಶಿವಶಂಕರ್, ಲೋಕೇಶ್, ದೇವರಾಜ, ಸುರೇಶ್ ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ