ನಿಮ್ಮ ಋಣ ಯಾವತ್ತೂ ಮರೆಯೋಕಾಗಲ್ಲ: ಡೆತ್‍ನೋಟ್ ಬರೆದಿಟ್ಟು ನದಿಗೆ ಜಿಗಿದ ಯುವತಿ

Published : Dec 27, 2019, 08:45 PM IST
ನಿಮ್ಮ ಋಣ ಯಾವತ್ತೂ ಮರೆಯೋಕಾಗಲ್ಲ: ಡೆತ್‍ನೋಟ್ ಬರೆದಿಟ್ಟು ನದಿಗೆ ಜಿಗಿದ ಯುವತಿ

ಸಾರಾಂಶ

ಸ್ಕೂಟಿಯಲ್ಲಿ ಬಂದ ಯುವತಿ ಡೆತ್ ನೋಟ್ ಸೇತುವೆ ಮೇಲೆ ಡೆತ್ ನೋಟ್ ಇಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರು..? ಎಲ್ಲಿ..? ಮುಂದಿದೆ ನೋಡಿ ಮಾಹಿತಿ

ಬಾಗಲಕೋಟೆ, [ಡಿ.27]: ಡೆತ್ ನೋಟ್ ಬರೆದಿಟ್ಟು ಯುವತಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಅನಗವಾಡಿ ಸೇತುವೆ ಬಳಿ ನಡೆದಿದೆ.

ಗಾಯತ್ರಿ ಮೃತ ಯುವತಿ. ಯುವತಿ ನೋಂದಣಿ ಇಲ್ಲದ ಸ್ಕೂಟಿಯಲ್ಲಿ ಬಂದು ಸೇತುವೆ ಮೇಲಿಂದ ನದಿಗೆ ಹಾರಲು ಯತ್ನಿಸಿದ್ದಾಳೆ.  ಇದನ್ನು ನೋಡಿ ಜನರು ಗಾಬರಿಗೊಂಡು ಆಕೆಯನ್ನು ತಡೆಯಲು ಓಡೋಡಿ ಬಂದಿದ್ದಾರೆ. ಆದರೆ ಜನರು ಬರುವಷ್ಟರಲ್ಲಿ ಯುವತಿ ನದಿಗೆ ಹಾರಿದ್ದಾಳೆ

ಬಳ್ಳಾರಿ: ಚಲಿಸುವ ಬಸ್ ಹಿಂಬದಿ ಚಕ್ರಕ್ಕೆ ತಲೆಕೊಟ್ಟ, ವಿಡಿಯೋ

ಸ್ಥಳದಲ್ಲಿ ಯುವತಿ ಬರೆದಿಟ್ಟಿರುವ ಡೆತ್‍ನೋಟ್ ಪೊಲೀಸರ ಕೈಗೆ ಸಿಕ್ಕಿದೆ.  'ಹಾಯ್, ಎಲ್ಲರೂ ನನ್ನನ್ನು ದಯವಿಟ್ಟು ಕ್ಷಮಿಸಿಬಿಡಿ. ನಿಮ್ಮ ಋಣವನ್ನು ಯಾವತ್ತೂ ಮರೆಯೋಕಾಗಲ್ಲ, ನನಗೆ ಬದುಕಲು ಆಗುತ್ತಿಲ್ಲ. ಕ್ಷಮಿಸಿ, ನನ್ನ ಸಾವಿಗೆ ನಾನೇ ಕಾರಣ. ಇಂತಿ ನಿಮ್ಮ ಪ್ರೀತಿಯ ಗಾಯತ್ರಿ' ಎಂದು ಯುವತಿ ಡೆತ್‍ನೋಟ್‍ನಲ್ಲಿ ಬರೆದಿದ್ದಾಳೆ.

ಯುವತಿ ಮೂಲತಃ ಎಲ್ಲಿಯವಳು? ಏಕೆ ಆತ್ಮಹತ್ಯೆಗೆ  ಮಾಡಿಕೋಂಡಿದ್ದಾಳೆ? ಎನ್ನುವ ಮಾಹಿತಿ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಬೀಳಗಿ ಪೊಲೀಸರು ಬಂದು ಯುವತಿಯ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ