Bengaluru Crime News: ಪ್ರೇಮಕ್ಕೆ ವಿರೊಧ: ಯುವತಿ ಬಾಯ್‌ಫ್ರೆಂಡ್ ಕೊಂದ ಮಾವ

Published : Jul 16, 2022, 05:46 PM IST
Bengaluru Crime News: ಪ್ರೇಮಕ್ಕೆ ವಿರೊಧ: ಯುವತಿ ಬಾಯ್‌ಫ್ರೆಂಡ್ ಕೊಂದ ಮಾವ

ಸಾರಾಂಶ

Bengaluru Crime News: ಯುವಕ-ಯುವತಿ ಒಬ್ಬನ್ನೊಬ್ಬರು ಇಷ್ಟ ಪಡುತ್ತಿದ್ದು, ಇವರಿಬ್ಬರ ಪ್ರೀತಿಗೆ ಯುವತಿ ಮನೆಯಲ್ಲಿ ಮಾವನ ವಿರೋಧವಿತ್ತು ಎನ್ನಲಾಗಿದೆ  

ಬೆಂಗಳೂರು (ಜು. 16):  ಬೆಂಗಳೂರಿನಲ್ಲಿ ಯುವತಿ ವಿಚಾರಕ್ಕೆ ಮತ್ತೊಂದು ಕೊಲೆಯಾಗಿದೆ.  ಹಳೆ ಮದ್ರಾಸ್ ರಸ್ತೆಯ ನ್ಯೂ ಬೈಯ್ಯಪ್ಪನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರಜ್ವಲ್ (18) ಕೊಲೆಯಾದ ಯುವಕ.  ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಪ್ರಜ್ವಲ್ ಯುವತಿಯನ್ನು ಲವ್ ಮಾಡುತ್ತಿದ್ದು, ಇಬ್ಬರು ಒಬ್ಬರನ್ನೊಬ್ಬರು ಇಷ್ಟ ಪಡುತ್ತಿದ್ದರು. ಇವರಿಬ್ಬರ ಪ್ರೀತಿಗೆ ಯುವತಿ ಮನೆಯಲ್ಲಿ ಮಾವನ ವಿರೋಧವಿತ್ತು. ಯುವತಿಗೆ ಪ್ರಜ್ವಲ್ ಮೇಸೆಜ್ ಹಾಕಿರೋದನ್ನು ಮಾವ  ನೋಡಿದ್ದರು.  ಮೇಸೆಜ್ ನೋಡಿ ಯುವತಿಗೆ ಯುವತಿ ಬೈದಿದ್ದರು.  

ಮೇಸೆಜ್ ನೋಡಿ ಪ್ರಜ್ವಲ್ ಹುಡುಕಿಕೊಂಡು ಯುವತಿ ಮನೆಯಲ್ಲಿ ಮಾವ ಬಂದಿದ್ದ. ಈ ವೇಳೆ ರಾತ್ರಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಬಳಿಕ ವಿವೇಕಾನಂದ ಮೆಟ್ರೋ ಸ್ಟೇಷನ್ ಬಳಿ ಯುವತಿ ಮಾವ ಪ್ರಜ್ವಲ್ ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದ. ಸ್ಥಳೀಯರು ಹಾಗೂ ಪೊಲೀಸರು ಪ್ರಜ್ವಲ್‌ನನ್ನ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದರು.  ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪ್ರಜ್ವಲ್ ಮೃತ ಪಟ್ಟಿದ್ದ. ಈ ಸಂಬಂಧ ಭೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಪತಿಗಾಗಿ ಪತ್ನಿ ಧರಣಿ: ಬೇರೆ ಜಾತಿ ಕಾರಣಕ್ಕೆ ಮತ್ತೊಂದು ವಿವಾಹವಾದ ಗಂಡ..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ