Sonali Phogat Murder Case: ಪ್ರಕರಣ ಸಿಬಿಐಗೆ ಹಸ್ತಾಂತರಿಸಲಿದ್ದೇವೆ; ಗೋವಾ ಸಿಎಂ ಸಾವಂತ್‌

Published : Sep 12, 2022, 01:03 PM IST
Sonali Phogat Murder Case: ಪ್ರಕರಣ ಸಿಬಿಐಗೆ ಹಸ್ತಾಂತರಿಸಲಿದ್ದೇವೆ; ಗೋವಾ ಸಿಎಂ ಸಾವಂತ್‌

ಸಾರಾಂಶ

Sonali Phogat murder case updates: ಹರಿಯಾಣ ಬಿಜೆಪಿ ನಾಯಕಿ ಮತ್ತು ಟಿಕ್‌ ಟಾಕ್‌ ಸ್ಟಾರ್‌ ಸೋನಾಲಿ ಫೋಗಟ್‌ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ತಿಳಿಸಿದ್ದಾರೆ.

ಪಣಜಿ: ಹರಿಯಾಣ ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್‌ ಕೊಲೆ ಪ್ರಕರಣ ಸಾಕಷ್ಟು ತಿರುವುಗಳನ್ನು ಕಂಡಿದೆ. ಕೊಲೆಯ ಪ್ರಮುಖ ಆರೋಪಿಗಳನ್ನು ಈಗಾಗಲೇ ಗೋವಾ ಪೊಲೀಸರು ಬಂಧಿಸಿದ್ದಾರೆ. ಆದರೆ ಇನ್ನೂ ಕೆಲವು ಮಿಸ್ಸಿಂಗ್‌ ಲಿಂಕ್‌ಗಳು ಪ್ರಕರಣದಲ್ಲಿ ಇರುವುದರಿಂದ ತನಿಖೆಯನ್ನು ಸಿಬಿಐಗೆ ನೀಡಲು ಗೋವಾ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾರಿಗೆ ಇಂದೇ ಪತ್ರ ಬರೆದು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಪೋಗಟ್‌ ಟಿಕ್‌ಟಾಕ್‌ ಮೂಲಕ ಮೊದಲು ಮುನ್ನೆಲೆಗೆ ಬಂದಿದ್ದರು. ಅದಾದ ನಂತರ ಹಿಂದಿ ಬಿಗ್‌ ಬಾಸ್‌ನಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಪಡೆಯುವ ಮೂಲಕ ಇನ್ನಷ್ಟು ಮನೆಮಾತಾಗಿದ್ದರು. ಆಗಸ್ಟ್‌ 23ರಂದು ಪೋಗಟ್‌ ಗೋವಾದಲ್ಲಿ ಮೃತಪಟ್ಟಿದ್ದರು. 

ಅಗತ್ಯ ಬಿದ್ದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ ಪ್ರಮೋದ್‌ ಸಾವಂತ್‌ ಈ ಹಿಂದೆಯೂ ಹೇಳಿದ್ದರು. ಗೋವಾ ಪೊಲೀಸರ ಕಾರ್ಯಕ್ಷಮತೆಯ ಬಗ್ಗೆ ಯಾವುದೇ ಸಂಶಯವಿಲ್ಲ, ಆದರೆ ಹರಿಯಾಣದ ಜನತೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿರುವುದಾಗಿ ಪ್ರಮೋದ್‌ ಸಾವಂತ್‌ ಹೇಳಿದ್ದಾರೆ. ಗೋವಾ ಪೊಲೀಸರು ಪ್ರಕರಣ ಸಂಬಂಧ ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಇಬ್ಬರು ಪ್ರಮುಖ ಆರೋಪಿಗಳು ಪೋಗಾಟ್‌ರ ಪಿಎಗಳಾಗಿ ಕೆಲಸ ಮಾಡುತ್ತಿದ್ದರು. 

ಆರೋಪಿ ತಪ್ಪೊಪ್ಪಿಗೆ:

 

 ಸೋನಾಲಿ ಫೋಗಟ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಸಾಂಗ್ವಾನ್ ರಿಮಾಂಡ್ ಅವಧಿಯಲ್ಲಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಕೊಲೆಗೆ ಸಂಚು ರೂಪಿಸಿದ್ದಾಗಿ ಆರೋಪಿಯೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಗೋವಾ ಪೊಲೀಸ್ ಮೂಲವೊಂದು ಮಾಹಿತಿ ನೀಡಿದೆ. ಆದರೆ, ಗೋವಾ ಡಿಜಿಪಿ ಜಸ್ಪಾಲ್ ಸಿಂಗ್ ಇದನ್ನು ಅಲ್ಲಗಳೆದಿದ್ದು, ಅಂಥ ಮಾಹಿತಿ ಇದ್ದಲ್ಲಿ ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಕೊಲೆ ಮಾಡುವ ಉದ್ದೇಶದಲ್ಲಿಯೇ ಸುಧೀರ್ ಸೋನಾಲಿಯನ್ನು ಗುರುಗ್ರಾಮದಿಂದ ಗೋವಾಕ್ಕೆ ಕರೆತಂದಿದ್ದ. ಗೋವಾದಲ್ಲಿ ಚಿತ್ರೀಕರಣ ಮಾಡುವ ಯಾವುದೇ ಯೋಜನೆ ಇರಲಿಲ್ಲ. ಸೋನಾಲಿ ಹತ್ಯೆಯ ಸಂಚು ಬಹಳ ಹಿಂದೆಯೇ ರೂಪಿಸಲಾಗಿತ್ತು. ಸುಧೀರ್ ಸಾಂಗ್ವಾನ್‌ಗೆ ಶಿಕ್ಷೆ ವಿಧಿಸಲು ಗೋವಾ ಪೊಲೀಸರು ಈ ಕೊಲೆ ಪ್ರಕರಣದಲ್ಲಿ ಕೆಲವು ದೃಢವಾದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಅದೇ ಸಮಯದಲ್ಲಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಆದಷ್ಟು ಬೇಗ ಚಾರ್ಜ್ ಶೀಟ್ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆಯನ್ನೂ ನೀಡಿದ್ದಾರೆ. ಆಗಸ್ಟ್‌ 23 ರಂದು ಗೋವಾದ ಕರ್ಲೀಸ್‌ ರೆಸ್ಟೋರೆಂಟ್‌ನಲ್ಲಿ ಈ ಕೊಲೆ ನಡೆದಿತ್ತು, ಅಂಜುನಾ ಪೊಲೀಸ್‌ ಠಾಣೆಯ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೊಲೆಗೂ ಮುನ್ನ ಸೋನಾಲಿ ರೇಪ್‌: ಸಹೋದರ ರಿಂಕು ಆರೋಪ!

ಸುಧೀರ್ ಸಂಗ್ವಾನ್‌, ಸುಖ್ವಿಂದರ್, ಕರ್ಲೀಸ್ ರೆಸ್ಟೋರೆಂಟ್‌ನ ಮಾಲೀಕ, ರೂಮ್ ಬಾಯ್ ದತ್ತ ಪ್ರಸಾದ್ ಗಾಂವ್ಕರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಕರ್ಲೀಸ್‌ ಕ್ಲಬ್ ರೆಸ್ಟೋರೆಂಟ್‌ ಮಾಲೀಕ ಎಡ್ವಿನ್ ಮತ್ತು ರಾಮ ಮಾಂಡ್ರೇಕರ್ ಅವರನ್ನು ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಧೀರ್‌ ಸಂಗ್ವಾನ್‌ ಹಾಗೂ ಸುಖ್ವಿಂದರ್‌, ಸೋನಾಲಿ ಪೋಗಟ್‌ರನ್ನು ಕೊಲೆ ಮಾಡುವ ಸಂಚು ರೂಪಿಸಿದ್ದರು. ಸುಧೀರ್‌ಗೆ 12 ಸಾವಿರ ರೂಪಾಯಿಗೆ ಡ್ರಗ್ಸ್‌ಅನ್ನು ನೀಡಿದ್ದು ದತ್ತ ಪ್ರಸಾದ್‌. ಇದಕ್ಕಾಗಿ ದತ್ತ ಪ್ರಸಾದ್‌ಗೆ ಸುಧೀರ್‌ ಸಂಗ್ವಾನ್‌ 5 ಸಾವಿರ ಹಾಗೂ 7 ಸಾವಿರ ರೂಪಾಯಿಯಲ್ಲಿ 2 ಬಾರಿ ಹಣ ಪಾವತಿ ಮಾಡಿದ್ದ. ಇನ್ನು ಕ್ಲಬ್‌ ಮಾಲೀಕ ಎಡ್ವಿನ್‌, ತನ್ನ ರೆಸ್ಟೋರೆಂಟ್‌ನಲ್ಲಿ ಡ್ರಗ್‌ ಬಳಕೆಗೆ ಯಾವುದೇ ವಿರೋಧ ವ್ಯಕ್ತಪಡಿಸಿರಲಿಲ್ಲ. ಇನ್ನು ರಾಮ ಮಂಡ್ರೇಕರ್‌ ಎನ್ನುವವನು ಡ್ರಗ್‌ ಪೆಡ್ಲರ್‌ ಆಗಿದ್ದು, ದತ್ತಪ್ರಸಾದ್‌ ಈತನ ಬಳಿಯೇ  ಸುಧೀರ್‌ಗೆ ಬೇಕಾದ ಡ್ರಗ್ಸ್‌ಅನ್ನು ಖರೀದಿ ಮಾಡಿದ್ದ.

ಗೋವಾ ಡಿಜಿಪಿ ಜಸ್ಪಾಲ್ ಸಿಂಗ್ (Goa DGP Jaspal Singh) ಪ್ರಕಾರ, ಆಗಸ್ಟ್ 22 ರ ರಾತ್ರಿ ತಾವು ಸೋನಾಲಿಗೆ (Sonali Phogat) ಬಲವಂತವಾಗಿ ಮಾದಕ ದ್ರವ್ಯ ನೀಡಿದ್ದಾಗಿ ಸುಧೀರ್ (sudhir sangwan) ಮತ್ತು ಸುಖ್ವಿಂದರ್ (Sukhwinder) ಒಪ್ಪಿಕೊಂಡಿದ್ದಾರೆ. ಅವರಿಗೆ ಮೆಥಾಂಫೆಟಮೈನ್  (MDMA) ಡ್ರಗ್‌ಅನ್ನು ನೀರಿನಲ್ಲಿ ಬೆರೆಸಿ ನೀಡಲಾಗಿತ್ತು. ಈ ಮೂವರು ಕೂಡ ಎಂಡಿಎಂಎಯನ್ನು ಹೋಟೆಲ್‌ ರೂಮ್‌ನಲ್ಲಿಯೇ ಮೂಸಿದ್ದರು. ಉಳಿದ ಎಂಡಿಎಂಎಯನ್ನು ನೀರಿನ ಬಾಟಲ್‌ನಲ್ಲಿ ಹಾಕಿಕೊಂಡು ಕರ್ಲೀಸ್‌ ಕ್ಲಬ್‌ಗೆ ತೆರಳಿದ್ದಾರೆ. ಸುಧೀರ್‌ ಇಲ್ಲಿ ಸೋನಾಲಿಗೆ ಇದೇ ಡ್ರಗ್ಸ್‌ಅನ್ನು ನೀಡಿದ್ದಾರೆ. ಡ್ರಗ್ಸ್‌ ಸೇವನೆಯಿಂದಾಗಿ ಮುಂಜಾನೆಯ ವೇಳೆಗೆ ಸೋನಾಲಿಯ ಆರೋಗ್ಯ ಹದೆಗೆಡಲು ಆರಂಭಿಸಿತ್ತು.

ಇದನ್ನೂ ಓದಿ: Sonali Phogat ನಿಗೂಢ ಸಾವು ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್, ದೇಹದಲ್ಲಿ 46 ಗಾಯದ ಗುರುತು ಪತ್ತೆ!

ಟಾಯ್ಲೆಟ್‌ನಲ್ಲಿಯೇ ಮಲಗಿದ್ದ ಸೋನಾಲಿ: ಇಬ್ಬರೂ ಆಕೆಯನ್ನು ವಾಶ್‌ರೂಮ್‌ಗೆ ಕರೆದೊಯ್ದಿದ್ದಾರೆ. ಅಲ್ಲಿ ಸೋನಾಲಿ ವಾಂತಿ ಮಾಡಿಕೊಂಡಿದ್ದಾಳೆ. ಸ್ವಲ್ಪ ಸಮಯದ ನಂತರ ಅವಳು ಹಿಂತಿರುಗಿ ಬಂದು ಡಾನ್ಸ್‌ ಮಾಡಲು ಪ್ರಾರಂಭಿಸಿದಳು. 4.30 ರ ಸುಮಾರಿಗೆ ಮತ್ತೆ ಶೌಚಾಲಯಕ್ಕೆ ಹೋಗಿದ್ದರು.ಆದರೆ ಆಕೆಗೆ ಈ ಸಮಯದಲ್ಲಿ ನಿಲ್ಲಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಸುಧೀರ್-ಸುಖ್ವಿಂದರ್ ಅವಳನ್ನು ಕರೆದುಕೊಂಡು ಹೋದಾಗ, ಅವಳು ಶೌಚಾಲಯದಲ್ಲಿಯೇ ಮಲಗಿಕೊಂಡಿದ್ದರು. ಇಬ್ಬರೂ ಶೌಚಾಲಯದಲ್ಲಿಯೇ ಕುಳಿತುಕೊಂಡಿದ್ದರು. ಬೆಳಗ್ಗೆ ಇಬ್ಬರೂ ಸೋನಾಲಿಯನ್ನು ಮೊದಲು ಪಾರ್ಕಿಂಗ್ ಏರಿಯಾಗೆ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ಗ್ರ್ಯಾಂಡ್ ಲಿಯೋನಿ ರೆಸಾರ್ಟ್‌ಗೆ ಕರೆತಂದಿದ್ದರು. ಆರೋಗ್ಯ ಹದಗೆಟ್ಟ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದೇ ವೇಳೆ ಮಹಿಳಾ ಶೌಚಾಲಯದಲ್ಲಿ ಡ್ರಗ್ಸ್ ಅನ್ನು ಬಚ್ಚಿಟ್ಟಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸೋನಾಲಿ ಪೋಗಟ್‌ ಕೇಸ್‌: ರೆಸ್ಟೋರೆಂಟ್‌ ಮಾಲೀಕನ ಬಂಧನ, ಬಾಥ್‌ರೂಮ್‌ನಲ್ಲಿ ಸಿಕ್ತು ಡ್ರಗ್ಸ್!

ಸುಧೀರ್‌ ಬ್ಲ್ಯಾಕ್‌ಮೇಲ್‌ ಮಾಡಿದ್ದ: ಉತ್ತರ ಪ್ರದೇಶದ ಸೀತಾಪುರ ಮೂಲದ ನಿರ್ದೇಶಕ ಹಾಗೂ ನಿರ್ಮಾಪಕ ಮೊಹಮದ್‌ ಅಕ್ರಮ್‌ ಅನ್ಸಾರಿ, ಸುಧೀರ್‌ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಬಗ್ಗೆ ಸೋನಾಲಿ ತಮಗೆ ಹೇಳಿದ್ದರು ಎಂದು ಹೇಳಿದ್ದಾರೆ. ನಾನು 12 ಈವೆಂಟ್‌ಗಳಲ್ಲಿ ಕೆಲಸ ಮಾಡಲು ಸೋನಾಲಿ ಫೋಗಟ್ ಅವರನ್ನು ಸಂಪರ್ಕಿಸಿದ್ದೆ, ಆದರೆ ಸುಧೀರ್‌ನಿಂದಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಲಿಲ್ಲ. ನಾನು ಮೇಡಂ ಅವರನ್ನು ಸಂಪರ್ಕಿಸಿದಾಗ, ನನ್ನ ಕೆಲವು ಪುರಾವೆಗಳು ಸುಧೀರ್ ಬಳಿ ಇವೆ, ಅದಕ್ಕೆ ಅವರು ನನ್ನನ್ನು ಬ್ಲ್ಯಾಕ್ ಮೇಲ್ ಮಾಡುತ್ತಾರೆ ಎಂದು ಹೇಳಿದ್ದರು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!