ಚಿಕ್ಕಬಳ್ಳಾಪುರ: ಮೃತ ಮಹಿಳೆ ಕತ್ತಲ್ಲಿದ್ದ ಚಿನ್ನ ಕಳವು?

Kannadaprabha News   | Asianet News
Published : May 03, 2021, 08:55 AM IST
ಚಿಕ್ಕಬಳ್ಳಾಪುರ: ಮೃತ ಮಹಿಳೆ ಕತ್ತಲ್ಲಿದ್ದ ಚಿನ್ನ ಕಳವು?

ಸಾರಾಂಶ

ಕೊರೋನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ ಮಹಿಳೆ| ಮಹಿಳೆಯ ಮೃತ ದೇಹವನ್ನು ಮನೆಗೆ ಒಯ್ಯುವ ಸಂದರ್ಭದಲ್ಲಿ ಕತ್ತಿನಲ್ಲಿದ್ದ 80 ಗ್ರಾಂ ಮಾಂಗಲ್ಯ ಸರ, 8 ಗ್ರಾಂ ತಾಳಿ, 4 ಗ್ರಾಂ ಗುಂಡುಗಳು ನಾಪತ್ತೆ| ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ ಮೃತರ ಸಂಬಂಧಿಕರು| 

ಚಿಕ್ಕಬಳ್ಳಾಪುರ(ಮೇ.03): ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ಸೋಂಕಿನಿಂದ ಮೃತಪಟ್ಟ ಮಹಿಳೆಯಿಂದ ಸುಮಾರು 90 ಗ್ರಾಂ ಚಿನ್ನ ಕಳವಾಗಿದೆ ಎಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಗಿಡ್ನಹಳ್ಳಿ ವಾಸಿ ಲಕ್ಷ್ಮಮ್ಮ ಇತ್ತೀಚೆಗೆ ಕೊರೋನಾ ಸೋಂಕು ದೃಢಪಟ್ಟು ಉಸಿರಾಟದ ತೊಂದರೆಯಿಂದ ಚಿಕ್ಕಬಳ್ಳಾಪುರದಲ್ಲಿರುವ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. 

"

1ನೇ ಅಲೆಗಿಂತ 2ನೇ ಅಲೆ ಎಷ್ಟು ಡೇಂಜರಸ್ : ಕೊರೋನಾ ಕರಾಳತೆ

ಕಳೆದ ಶನಿವಾರ ರಾತ್ರಿ ಲಕ್ಷ್ಮಮ್ಮ ಕೊರೋನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದರು. ಆದರೆ ಮಹಿಳೆಯ ಮೃತ ದೇಹವನ್ನು ಮನೆಗೆ ಒಯ್ಯುವ ಸಂದರ್ಭದಲ್ಲಿ ಕತ್ತಿನಲ್ಲಿದ್ದ 80 ಗ್ರಾಂ ಮಾಂಗಲ್ಯ ಸರ, 8 ಗ್ರಾಂ ತಾಳಿ, 4 ಗ್ರಾಂ ಗುಂಡುಗಳು ನಾಪತ್ತೆಯಾಗಿವೆ. ಕೇವಲ ಕಾಲು ಚೈನು ಉಳಿಸಿ, ಉಳಿದಂತೆ ಆಕೆಯ ಕತ್ತಿನಲ್ಲಿದ್ದ ಲಕ್ಷಾಂತರ ರು, ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು ಎಂದು ಮೃತರ ಸಂಬಂಧಿಕರು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ