ಕಲಬುರಗಿ: ಮರೆಮ್ಮ ದೇವಿಯ ಬೆಳ್ಳಿ ಮೂರ್ತಿ, ಬಂಗಾರದ ಮೂಗುತಿ ಕಳವು

Published : Feb 01, 2024, 11:30 PM IST
ಕಲಬುರಗಿ: ಮರೆಮ್ಮ ದೇವಿಯ ಬೆಳ್ಳಿ ಮೂರ್ತಿ, ಬಂಗಾರದ ಮೂಗುತಿ ಕಳವು

ಸಾರಾಂಶ

ಈ ಸಂಬಂಧ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಬಸವರಾಜ ಹಬ್ಬಣ್ಣ 

ಕಲಬುರಗಿ(ಫೆ.01):  ತಾಲೂಕಿನ ಬಸವಪಟ್ಟಣ ಗ್ರಾಮದ ಭೀಮಾನದಿ ದಡದಲ್ಲಿರುವ ಕೌಂಟಗಿ ಮರೆಮ್ಮ ದೇವಸ್ಥಾನದ ಬೀಗ ಮುರಿದು ಕಳ್ಳರು ದೇವಸ್ಥಾನದ ಒಳಗಿದ್ದ ದೇವಿಯ 35 ಸಾವಿರ ರು. ಮೌಲ್ಯದ ಅರ್ಧ ಕೆ.ಜಿ. ಬೆಳ್ಳಿ ಮೂರ್ತಿ ದೇವಿಯ ಮೂಗಿನಲ್ಲಿದ್ದ ಒಂದು ತೊಲೆಯ 60 ಸಾವಿರ ರು. ಮೌಲ್ಯದ ಬಂಗಾರದ ಮೂಗುತಿ ಮತ್ತು ದೇವಸ್ಥಾನದ ಹುಂಡಿಯಲ್ಲಿದ್ದ 35 ಸಾವಿರ ರು. ನಗದು ಸೇರಿ 1.30 ಲಕ್ಷ ರು. ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.

ಈ ಸಂಬಂಧ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಬಸವರಾಜ ಹಬ್ಬಣ್ಣ ಅವರು ಫರಹತಾಬಾದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಅಬ್ಬಬ್ಬಾ ಮನೆಗಳ್ಳತನ ಮಾಡಲು ಹೈದರಾಬಾದ್‌ನಿಂದ ಬೆಂಗಳೂರಿಗೆ ಕಾರಿನಲ್ಲಿ ಬರುತ್ತಿದ್ದ ಖದೀಮರು!

ದೇವಸ್ಥಾನದ ಪೂಜಾರಿ ಗಣಪತಿ ಉಪಾಸೆ ಅವರು ಮಂಗಳವಾರ, ಶುಕ್ರವಾರ, ಹುಣ್ಣಿಮೆ-ಅಮವಾಸ್ಯೆಯಂದು ಮಾತ್ರ ಬೆಳಿಗ್ಗೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದು ಪೂಜೆ ಮಾಡಿ ನಂತರ ಸಾಯಂಕಾಲ 6 ಗಂಟೆಗೆ ದೇವಸ್ಥಾನದ ಬೀಗ ಹಾಕಿಕೊಂಡು ಮನೆಗೆ ಹೋಗುತ್ತಾರೆ. ಅದರಂತೆ ಜನವರಿ 26 ರಂದು ದೇವಸ್ಥಾನದ ಬೀಗ ತೆರೆದು ಪೂಜೆ ಮಾಡಿ ಸಾಯಂಕಾಲ ಬೀಗ ಹಾಕಿಕೊಂಡು ಹೋಗಿದ್ದಾರೆ. ಜ.27 ರಂದು ಬೆಳಿಗ್ಗೆ ದೇವಸ್ಥಾನದ ದರ್ಶನಕ್ಕೆ ಹೋದಾಗ ದೇವಸ್ಥಾನದಲ್ಲಿ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!